Advertisement

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್: ಅಮಾನತು

09:29 AM Oct 26, 2021 | Team Udayavani |

ಉದಯಪುರ: ಐಸಿಸಿ ಟಿ20 ವಿಶ್ವಕಪ್ ನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧ ಸೋಲನುಭವಿಸಿದೆ. ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಸೋಲಿನ ಸರಪಣಿಯನ್ನು ಪಾಕ್ ತಂಡ ಕಳಚಿಕೊಂಡಿದೆ. ಆದರೆ ಪಾಕ್ ಗೆಲುವನ್ನು ರಾಜಸ್ಥಾನದ ಶಿಕ್ಷಕಿಯೊಬ್ಬರು ಸಂಭ್ರಮಾಚರಣೆ ಮಾಡಿದ್ದು, ಅವರನ್ನು ಅಮಾನತು ಮಾಡಲಾಗಿದೆ.

Advertisement

ಉದಯಪುರದ ನೀರ್ಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಎಂಬವರೇ ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ಶಿಕ್ಷಕಿ. ಅವರು ತನ್ನ ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಪಾಕ್ ತಂಡದ ಚಿತ್ರ ಹಾಕಿ ‘ನಾವು ಗೆದ್ದೆವು’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ:ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಶಾಲೆಯ ವಿದ್ಯಾರ್ಥಿಯ ಪೋಷಕರೊಬ್ಬರು ಆಕೆಗೆ ನೀವು ಪಾಕಿಸ್ಥಾನಕ್ಕೆ ಬೆಂಬಲ ನೀಡುತ್ತಿದ್ದೀರಾ ಎಂದು ಕೇಳಿದಾಗ ನಫೀಸಾ ‘ಹೌದು’ ಎಂದು ಉತ್ತರಿಸಿದ್ದಾರೆ. ಆಕೆಯ ವ್ಯಾಟ್ಸಪ್ ಸ್ಟೇಟಸ್ ನ ಸ್ಕ್ರೀನ್ ಶಾಟ್ ವೈರಲ್ ಆದ ಬಳಿಕ ಶಾಲಾ ಆಡಳಿತ ಮಂಡಳಿ ಆಕೆಯನ್ನು ಕೆಲಸದಿಂದ ಅಮಾನತುಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next