Advertisement

ಸಾಗರ: ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ನ್ಯಾಯಾಂಗ ಬಂಧನ

07:35 PM Mar 02, 2022 | Suhan S |

ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆಯಿಂದ ಅಮಾನತುಗೊಂಡಿದ್ದ ಶಿಕ್ಷಕನನ್ನು ಸಂತ್ರಸ್ತೆ ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಪೋಕ್ಸೋ ಕಾಯ್ದೆ ಅಡಿ ವಶಕ್ಕೆ ಪಡೆದ ಗ್ರಾಮಾಂತರ ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

ಸಹ ಶಿಕ್ಷಕ ಆರ್.ಚಂದ್ರಶೇಖರ್ ಬಂಧನಕ್ಕೆ ಒಳಗಾದ ಶಿಕ್ಷಕ. ಹೆಣ್ಣುಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದ್ದು ಆ ಸಂಬಂಧ ಫೆ. 25ರಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಮುಖ್ಯಶಿಕ್ಷಕರಿಗೆ ದೂರು ಅರ್ಜಿ ನೀಡಿದ್ದರು. ಎಸ್‌ಡಿಎಂಸಿ ಪದಾಧಿಕಾರಿಗಳ ಜತೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಸಭೆ ನಡೆಸಿದ್ದರು.

ಅಲ್ಲದೆ ವಿದ್ಯಾರ್ಥಿನಿಯರ ಜತೆ ಸಹ ಕ್ಷೇತ್ರ ಶಿಕ್ಷಣಾಧಿಕಾರಿ ಮಾತುಕತೆ ನಡೆಸಿ, ಅಹವಾಲು ಆಲಿಸಿದ್ದರು. ಆನಂತರ ಶಿಕ್ಷಕ ಅಮಾನತುಗೊಂಡಿದ್ದರು. ಈ ನಡುವೆ ಸಂತ್ರಸ್ತ ವಿದ್ಯಾರ್ಥಿನಿ ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next