Advertisement

ಶಿಕ್ಷಕರ ನೇಮಕಾತಿ ಹಗರಣ CBI ಗೆ

10:12 PM Apr 22, 2023 | Team Udayavani |

ಕೋಲ್ಕತ: ಪಶ್ಚಿಮ ಬಂಗಾಳದ ಮಹಾನಗರ ಪಾಲಿಕೆ ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಕಲ್ಕತ್ತ ಹೈಕೋರ್ಟ್‌ ನಿರ್ದೇಶಿಸಿದೆ. ಶಾಲಾ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದ ತನಿಖೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಂಡುಕೊಂಡ ಅಂಶಗಳನ್ನು ಆಧರಿಸಿ, ಹೈಕೋರ್ಟ್‌ ಈ ಆದೇಶ ನೀಡಿದೆ. ಅಗತ್ಯಬಿದ್ದರೆ ಸಿಬಿಐ ಈ ಹಗರಣದ ತನಿಖೆಗೆ ಎಫ್ಐಆರ್‌ ದಾಖಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಹಗರಣಕ್ಕೆ ಸಂಬಂಧಿಸಿದಂತೆ ಏಜೆಂಟ್‌ ಅಯಾನ್‌ ಸಿಲ್‌ ಎಂಬುವವನನ್ನು ಇಡಿ ಈಗಾಗಲೇ ಬಂಧಿಸಿದೆ. ಮಹಾನಗರ ಪಾಲಿಕೆ ಗುಮಾಸ್ತ, ಚಾಲಕ, ಸ್ವತ್ಛತಾ ಸಿಬ್ಬಂದಿಯ ನೇಮಕ ಹಗರಣದಲ್ಲೂ ಈತನ ಕೈವಾಡವಿದೆ ಎಂಬ ಆರೋಪವಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next