Advertisement

ಸಿಸಿಟಿವಿ ಕಣ್ಗಾವಲಿನಲ್ಲಿ ಶಿಕ್ಷಕರ ನೇಮಕ ಪರೀಕ್ಷೆ

02:05 AM May 11, 2022 | Team Udayavani |

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ)ರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಕಡ್ಡಾಯವಾಗಿ ಅಳ ವಡಿಸಲು ತೀರ್ಮಾನಿಸಲಾಗಿದೆ.

Advertisement

ಪರೀಕ್ಷಾರ್ಥಿಗಳಿಗೆ 3 ಸುತ್ತಿನ ತಪಾಸಣೆ ನಡೆಸಲಾಗುತ್ತದೆ. ಆದ್ದರಿಂದ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜ ರಾಗಬೇಕು. ಅನಧಿಕೃತವಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಅಧಿ ಕಾರಿಗಳು, ಸಿಬಂದಿ ಮತ್ತು ಸಾರ್ವಜನಿಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.

ಎಲೆಕ್ಟ್ರಾನಿಕ್‌ ಗ್ಯಾಜೆಟ್‌ ತರಲು ಅವಕಾಶ ಇಲ್ಲ. ಪರೀಕ್ಷೆಯಲ್ಲಿ ಅಕ್ರಮ- ಅನುಮಾನ, ವ್ಯತ್ಯಾಸಕ್ಕೆ ಅವಕಾಶ ಇಲ್ಲದಂತೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next