Advertisement

ಸಾಗರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

04:43 PM Mar 01, 2022 | Team Udayavani |

ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೋಮವಾರ ಅಮಾನತುಗೊಂಡಿದ್ದಾರೆ.

Advertisement

ಶಿಕ್ಷಕ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಅವರಿಗೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಸೋಮವಾರ ಬಿಇಓ ಶಾಲೆಗೆ ಭೇಟಿ ನೀಡಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಜೊತೆ ಮಾತುಕತೆ ನಡೆಸಿದರು.

ನಂತರ ಕೆಲವು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕರೆದು ಸಮಸ್ಯೆ ಆಲಿಸಿದಾಗ ಶಿಕ್ಷಕ ಕಿರುಕುಳ ನೀಡುತ್ತಿರುವ ಬಗ್ಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಶಿಕ್ಷಕ ಚಂದ್ರಶೇಖರ್ ಅವರನ್ನು ಅಮಾನತ್ತು ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ದೃಢಪಡಿಸಿರುವ ಬಿಇಓ ಬಿಂಬ, ಮೇಲ್ನೋಟಕ್ಕೆ ಶಾಲಾಭಿವೃದ್ಧಿ ಸಮಿತಿ, ಪೋಷಕರು ಮತ್ತು ವಿದ್ಯಾರ್ಥಿನಿಯರು ಮಾಡಿರುವ ಆರೋಪ ಸತ್ಯ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಿ, ಮುಂದಿನ ಕ್ರಮಕ್ಕೆ ಡಿಡಿಪಿಐಗೆ ವರದಿ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next