Advertisement

ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ

12:40 AM Sep 23, 2021 | Team Udayavani |

ಬೆಂಗಳೂರು: ಶಿಕ್ಷಕರ ವರ್ಗಾವಣೆ ಮಸೂದೆಗೆ ಉತ್ತರ ಕರ್ನಾಟಕ ಭಾಗದ ಶಾಸಕರ ವಿರೋಧದ ನಡುವೆ ಅಂಗೀಕಾರ ನೀಡಲಾಯಿತು.

Advertisement

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಮಸೂದೆಯ ಕುರಿತು ಮಾತನಾಡಿ, ಯಾರು ಒತ್ತಾಯ ಪೂರ್ವಕವಾಗಿ ವರ್ಗಾವಣೆ ಯಾಗಿದ್ದರೋ ಅವರಿಗೆ ಒಂದು ಬಾರಿ ಅವಕಾಶ ಕಲ್ಪಿಸಲು ಈ ಮಸೂದೆ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆದರೆ ಬೇರೆ ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆಗೆ ಅವಕಾಶವಿಲ್ಲ ಎಂದರು.

ಕಡ್ಡಾಯ ವರ್ಗಾವಣೆ ಹಿನ್ನೆಲೆಯಲ್ಲಿ ಅಂಗ ವಿಕಲರು, ಗರ್ಭಿಣಿಯರು, 55 ವರ್ಷ ಮೀರಿ ದವರನ್ನು  ವರ್ಗಾಯಿಸಲಾಗಿತ್ತು. ಹೀಗಾಗಿ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಒಮ್ಮೆ ಮಾತ್ರ ಅವರು ಮರಳಿ ಹಿಂದಿನ ಶಾಲೆಗೆ ಹೋಗಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಅನಂತರ ವರ್ಗಾಣೆ ಮಸೂದೆಗೆ ಅಂಗೀಕಾರ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next