Advertisement

ಆ. 23ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

01:32 AM Aug 20, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುಕ್ರ ವಾರದಿಂದ ಮರು ಪ್ರಾರಂಭಿಸಲು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Advertisement

ಇದರಿಂದಾಗಿ ಹಲವಾರು ಕಾರಣ ಗಳಿಂದ ಎರಡು ವರ್ಷಗಳಿಂದ ಪದೇ ಪದೆ ಮುಂದೂಡ ಲ್ಪಡುತ್ತಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಮುಕ್ತಿ ದೊರೆಯುವ ನಿರೀಕ್ಷೆ ಹೊಂದಲಾಗಿದೆ.

ವರ್ಗಾವಣೆ ಪ್ರಕ್ರಿಯೆ ಪುನರ್‌ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮ ವಾರ ಶಿಕ್ಷಣ ಇಲಾಖೆ ಅಧಿ ಕಾರಿ ಗಳು ಹಾಗೂ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ಸಮಾ ಲೋಚನೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿದ, ರಾಜ್ಯ ಪಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಸಂಚಾಲಕ ಮಾಲತೇಶ್‌ ಬಬ್ಟಾಜಿ, ಮುಖ್ಯಮಂತ್ರಿಗಳ ಕಾಳಜಿ ಸ್ವಾಗ ತಾರ್ಹ. ಆದರೆ 2017ರ ಶಿಕ್ಷಕರ ವರ್ಗಾವಣೆ ಕಾಯ್ದೆ ಅವೈಜ್ಞಾನಿಕ ವಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದ 2007ರ ವರ್ಗಾವಣೆ ಕಾಯ್ದೆ ಅನ್ವಯ ಪ್ರಕ್ರಿಯೆ ನಡೆಯಲಿ ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next