Advertisement

ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ರೂವಾರಿಗಳಾಗಿ: ಪ್ರಮೋದ್‌

06:55 AM Sep 19, 2017 | Team Udayavani |

ಉಡುಪಿ: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳಾಬೇಕು. ಶಿಕ್ಷಣ ನೀಡುವುದಕ್ಕಿಂತಲೂ ಇತರ ಚಟುವಟಿಕೆಗಳಿಗೆ ಗಮನ ಕೊಡುವುದನ್ನು ನಿಲ್ಲಿಸಬೇಕು ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಸೋಮವಾರ ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆದ ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್‌ ಅವರ ಸಮ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿ  ಎಂಜಿನಿಯರ್‌, ಡಾಕ್ಟರ್‌ ಆಗಬೇಕೆಂದು ಬಯಸುತ್ತಾರೆ. ಇಂತಹ ಪ್ರವೃತ್ತಿಯನ್ನು ಶಿಕ್ಷಕರು ಸರಿಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಪೌರಾಯುಕ್ತ 
ಡಿ. ಮಂಜುನಾಥಯ್ಯ, ನಗರಸಭೆ ಸದಸ್ಯರಾದ ದಿನಕರ ಶೆಟ್ಟಿ ಹೆರ್ಗ, ರಮೇಶ್‌ ಕಾಂಚನ್‌, ಯುವರಾಜ್‌ ಪಿ., ಶಾಂತಾರಾಮ್‌ ಸಾಲ್ವಂಕಾರ್‌, ನಾರಾಯಣ ಕುಂದರ್‌, ಮಂಗಳೂರು ವಿ.ವಿ. ಸೆನೆಟ್‌ ಸದಸ್ಯ ಅಮೃತ್‌ ಶೆಣೈ, ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಲೋಕೇಶ್‌, ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ. ಪ್ರಕಾಶ್‌ ಶೆಣೈ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ನಾಯ್ಕ ಉಪಸ್ಥಿತರಿದ್ದರು. 

ನಿವೃತ್ತ ಮುಖ್ಯೋಪಾಧ್ಯಾಯ ಹರಿದಾಸ ಬಿ.ಸಿ. ರಾವ್‌ ಶಿವಪುರ ಅಭಿನಂದನ ಭಾಷಣ ಮಾಡಿದರು. ನಗರಸಭೆ ಸದಸ್ಯ ಸುಕೇಶ್‌ ಕುಂದರ್‌ ಅವರು ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ನಿರಂಜನ್‌ ರಾವ್‌ ಪ್ರಸ್ತಾವನೆಗೈದರು. 
ಸತೀಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವನಿತಾ ಅವರು ವಂದಿಸಿದರು.

Advertisement

ಉಡುಪಿ:  ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಯು. ಅಹಲ್ಯಾ ರಮಾನಂದ ರಾವ್‌ ಅವರನ್ನು ಸಮ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next