Advertisement
ನಗರದ ಟಕ್ಕೆ ಪ್ರದೇಶದಲ್ಲಿರುವ ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಿಕ್ಷಕರು, ಸರ್ಕಾರದ ಆದೇಶದವಿದ್ದರೂ ವಿಜಯಪುರದ ಗ್ರಾಮೀಣ ವಲಯದ ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಶಿಕ್ಷಕರ 2-3 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಪದೇ ಪದೇ ಈ ವಿಷಯದಲ್ಲಿ ಹೋರಾಟ ಮಾಡುವುದು ಸಾಮಾನ್ಯವಾಗಿದೆ ಎಂದು ದೂರಿದರು.
ವಿಶೇಷ ವೇತನ ಬಡ್ತಿಯ ಬಾಕಿ ವೇತನ ಜಮೆ ಮಾಡಬೇಕು.
Related Articles
Advertisement
ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಕಚೇರಿಗೆ ಬಿಲ್ ಸಲ್ಲಿಸಿದರೂ ಮಂಜೂರು ಮಾಡಿಲ್ಲ. ತಕ್ಷಣ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ನಿವೃತ್ತಿ ವೇತನ ಸಹಿತವಾಗಿ 2005ರಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೂ ಇಲಾಖೆ ಅನುಮತಿ ಸಹಿತ ನೇಮಕಗೊಂಡಿರುವ ಶಿಕ್ಷಕರ ನಿವೃತ್ತಿ ವೇತನ ಸಹಿತವಾಗಿ ಎಲ್ಲ ಆರ್ಥಿಕ ಸೌಲಭ್ಯ ಕಲ್ಪಿಸಬೇಕುಎಂದ ಆಗ್ರಹಿಸಿದರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎನ್. ಹುರಳಿ, ಶಿಕ್ಷಕರ ವೇತನ ಬಿಡುಗಡೆ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಬರುವ ಒಂದು ವಾರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಗ್ರಾಮೀಣ ವಲಯದ ಅಧ್ಯಕ್ಷ ಎ.ಎನ್. ಬಗಲಿ, ಕಾರ್ಯದರ್ಶಿ ಎ.ಆರ್. ಮಾಶ್ಯಾಳ, ಆರ್.ಎಸ್. ಬನಸೋಡೆ, ಅಶೋಕ ಬೂದಿಹಾಳ, ಎಂ.ಎಸ್. ಟಕ್ಕಳಕಿ, ಮಹಾಂತೇಶ ಕದ್ದಿ, ಬಸವರಾಜ ಪಡಗನೂರ,
ಹನುಮಂತ ಕಾಲೆಬಾಗ, ಪರಮೇಶ್ವರ ಗದ್ಯಾಳ, ಅನಿಲ ಗುಡೆಪ್ಪಗೋಳ, ಅಡಿವೆಪ್ಪ ಸಾಹುಕಾರ, ವಿ.ಎಸ್. ನಿಂಗರೆಡ್ಡಿ, ಶಿವಶರಣಪ್ಪ ತಡಲಗಿ, ಪ್ರಕಾಶ ಕುಲಂಗಿ, ಕುಮಾರ ಗಳತಗಿ, ಎಸ್.ಎನ್. ಬಾಗಲಕೋಟೆ, ವಿ.ಎಸ್. ಕಪಟಕರ, ಎಂ.ಎಚ್. ಜಮಾದಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.