Advertisement
ತಾಲೂಕು ಸೇವಾನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪದವಿ ವಿದ್ಯಾರ್ಹತೆ ಮತ್ತು ಸೇವಾನುಭವ ಹೊಂದಿರುವ ಸೇವಾನಿರತ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರನ್ನು ಮುಂಭಡ್ತಿಗೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇದಿಕೆಯ ಅಧ್ಯಕ್ಷ ವಿಮಲ್ ಕುಮಾರ್ ನೆಲ್ಯಾಡಿ ಮಾತನಾಡಿ, ಸೇವಾನುಭವ ಹೊಂದಿರುವ ಶಿಕ್ಷಕರು 6ರಿಂದ 8ನೇ ತರಗತಿಗಳಿಗೆ 14 ವರ್ಷಗಳಿಂದ ಬೋಧಿಸುತ್ತಾ ಬಂದಿದ್ದಾರೆ. ಆದರೆ ಅವರನ್ನು ಮುಂಭಡ್ತಿಗೆ ಪರಿಗಣಿಸದೆ ಒಂದರಿಂದ 5ನೇ ತರಗತಿ ತನಕ ಬೋಧಿಸುವ ಶಿಕ್ಷಕರೆಂದು ಆದೇಶ ಹೊರಡಿಸಿರುವುದು ಹಾಗೂ 6ರಿಂದ 8ನೇ ತರಗತಿ ಬೋಧನೆಗಾಗಿ ನೇರ ನೇಮಕಾತಿ ನಡೆಸುತ್ತಿರುವುದರಿಂದ ಪದವಿ ವಿದ್ಯಾರ್ಹತೆ ಮತ್ತು ಸೇವಾನುಭವ ಹೊಂದಿರುವವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಈ ಕುರಿತು ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ ಹಾಗೂ ಸಚಿವರಿಗೆ ಮನವರಿಕೆ ಮಾಡಲಾಗಿದ್ದರೂ ಉಪವಾಸ ಸತ್ಯಾಗ್ರಹ ನಡೆಸಿ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದರೂ ಈ ತನಕ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿದರು.
Related Articles
Advertisement
ಮುಖ್ಯಮಂತ್ರಿಗೆ ಮನವಿಸೇವೆಯಲ್ಲಿರುವ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಇಲ್ಲವಾದಲ್ಲಿ ನಾವು ಜೂ. 2ರಿಂದ 1ರಿಂದ 5ನೇ ತರಗತಿ ತನಕ ಮಾತ್ರ ಬೋಧಿಸುತ್ತೇವೆ. 6ರಿಂದ 8ರ ತನಕದ ತರಗತಿ ಬೋಧನೆಯನ್ನು ಬಹಿಷ್ಕರಿಸುತ್ತೇವೆ ಎಂಬ ಉಲ್ಲೇಖವಿರುವ ಮನವಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮೂಲಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.