Advertisement

ಬಯಸುವ ಜಿಲ್ಲೆಗೆ ಶಿಕ್ಷಕರಿಗೆ ವರ್ಗ: ಸಚಿವರ ಸೂಚನೆ

07:53 PM Aug 04, 2022 | Team Udayavani |

ಬೆಂಗಳೂರು: ತಾವು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾಯಿಸಬೇಕೆಂಬ ಶಿಕ್ಷಕರ ಬಹು ವರ್ಷಗಳ ಬೇಡಿಕೆಯನ್ನು ಪರಿಶೀಲಿಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.

Advertisement

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು  ಸೇವಾವಧಿಯಲ್ಲಿ ಒಂದು ಬಾರಿ ಅವರು ಬಯಸುವ ಜಿಲ್ಲೆಗೆ ವರ್ಗಾಯಿಸುವ ಸಂಬಂಧ ಶಿಕ್ಷಕರ ಅಭಿಪ್ರಾಯ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಗುರುವಾರ ನಿರ್ದೇಶನ ನೀಡಿದ್ದಾರೆ.

ವರ್ಗಾವಣೆ ಸಂಬಂಧ  ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next