Advertisement

ಶಿಕ್ಷಕರ ವರ್ಗಾವಣೆ ಇನ್ನಷ್ಟು ವಿಳಂಬ ಸಾಧ್ಯತೆ?

07:25 AM Oct 12, 2017 | Team Udayavani |

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜಯ್‌ ಸೇಠ್  ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಶಿಕ್ಷಕರು ಬಹುದಿನಗಳಿಂದ ಕಾಯುತ್ತಿರುವ ವರ್ಗಾವಣೆ ಇನ್ನಷ್ಟು ವಿಳಂಬವಾಗುವ ಆತಂಕ ಎದುರಾಗಿದೆ.

Advertisement

ಶಿಕ್ಷಕರ ವರ್ಗಾವಣೆಯ ಕರಡು ಪ್ರತಿಗೆ ಶಿಕ್ಷಕರು ಮತ್ತು ಶಿಕ್ಷಕರ ಸಂಘಟನೆಗಳು ಈಗಾಗಲೇ ಆಕ್ಷೇಪಣೆಗಳನ್ನು ಸಲ್ಲಿಸಿಯಾಗಿದೆ. ಈ ಎಲ್ಲಾ ಆಕ್ಷೇಪಣೆಗಳನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದ್ದರೂ, ದೀಪಾವಳಿಗೆ ಮೊದಲು ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗುವ ಯಾವ ಸಾಧ್ಯತೆಯೂ ಇಲ್ಲ.

ಈ ಮಧ್ಯೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್‌ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next