Advertisement

ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್‌ಗೆ ತಂಡ

12:32 PM Aug 10, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಇಸ್ರೇಲ್‌ ಮಾದರಿ ಕೃಷಿ ಪದ್ಧತಿ ಜಾರಿಗೊಳಿಸುವ ಬಗ್ಗೆ ಪೂರ್ವ ಸಿದ್ಧತೆಗಾಗಿ ತಂಡದೊಂದಿಗೆ ಇಸ್ರೇಲ್‌ಗೆ ಭೇಟಿ ನೀಡುವ ಬಗ್ಗೆ ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ತಮ್ಮ ಅನುಮತಿ ಕೇಳಿದ್ದು, ಶೀಘ್ರವೇ ತಂಡವೊಂದು ಅಲ್ಲಿಗೆ ತೆರಳಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂಂದಿಗೆ ಮಾತನಾಡಿ, ಇಸ್ರೇಲ್‌ ಮಾದರಿ ಕೃಷಿ ಪದ್ಧತಿ ಮತ್ತು ಶೂನ್ಯ ಬಂಡವಾಳ ಕೃಷಿ ಪದ್ಧತಿಯನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇಸ್ರೇಲ್‌ಗೆ ತಂಡ ಕಳುಹಿಸುವುದರ ಜತೆಗೆ ಅಲ್ಲಿನ ತಜ್ಞರನ್ನೂ ರಾಜ್ಯಕ್ಕೆ ಕರೆಸಲಾಗುವುದು. ಅದೇ ರೀತಿ ಶೂನ್ಯ ಬಂಡವಾಳ ಕೃಷಿ ಕುರಿತಂತೆ ಈಗಾಗಲೇ ಹಲವು ಸುತ್ತಿನ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಮಂಡ್ಯದಲ್ಲಿ ಆ.11ರಂದು ಇಸ್ರೇಲ್‌ ಮಾದರಿ ಕೃಷಿ ಪದ್ಧತಿಗೆ ಚಾಲನೆ ನೀಡುತ್ತಿಲ್ಲ. ಕಳೆದ ಮೂರು ವರ್ಷದಿಂದ ಮಳೆ ಇಲ್ಲದೆ ಅಲ್ಲಿನ ರೈತರು ಭತ್ತ ನಾಟಿ ಮಾಡುವುದನ್ನೇ ಮರೆತು ಹುರುಳಿ ಬೆಳೆಯುತ್ತಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಭತ್ತ ನಾಟಿ ಮಾಡಲು ರೈತರು ನಿರ್ಧರಿಸಿದ್ದಾರೆ. ತಾವೂ ರೈತರೊಂದಿಗೆ ಸೇರಿ ಭತ್ತ ನಾಟಿ ಮಾಡಿ ಅವರೊಂದಿಗೆ ಊಟ ಮಾಡುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next