Advertisement

ವಿಂಡೀಸ್ ವಿರುದ್ದ ಏಕದಿನ ಸರಣಿ: ಟಾಸ್ ಗೆದ್ದ ಭಾರತ; ಮುಖೇಶ್ ಪದಾರ್ಪಣೆ

06:44 PM Jul 27, 2023 | Team Udayavani |

ಬಾರ್ಬಡೋಸ್: ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದ ಭಾರತ ತಂಡವು ಇಂದಿನಿಂದ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯವು ಬಾರ್ಬಡೋಸ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದೆ.

Advertisement

ಭಾರತದ ಪರ ಮುಖೇಶ್ ಕುಮಾರ್ ಅವರು ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದೆ. ಭಾರತವು ಇಂದು ನಾಲ್ಕು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದೆ.

ಟಾಸ್ ಸಮಯದಲ್ಲಿ ಮಾತನಾಡಿದ ನಾಯಕ ರೋಹಿತ್, ನಾವು ಕೆಲವು ವಿಭಿನ್ನ ವಿಷಯಗಳನ್ನು ಪ್ರಯತ್ನಿಸುತ್ತೇವೆ. ನಾವು ಸ್ಪಷ್ಟ ಮನಸ್ಥಿತಿಯೊಂದಿಗೆ ವಿಶ್ವಕಪ್‌ ಗೆ ಹೋಗಲು ಬಯಸುತ್ತೇವೆ. ನಮಗೆ ಫಲಿತಾಂಶಗಳು ಸಹ ಮುಖ್ಯವಾಗಿದೆ. ಕೆಲವೊಮ್ಮೆ, ನಾವು ವಿಭಿನ್ನ ಆಟಗಾರರನ್ನು ಪ್ರಯತ್ನಿಸಲಿದ್ದೇವೆ ಆದರೆ ಫಲಿತಾಂಶಗಳು ನಮಗೆ ಮುಖ್ಯವಾಗಿದೆ ಎಂದರು.

ವೆಸ್ಟ್ ಇಂಡೀಸ್: ಶಾಯ್ ಹೋಪ್ (ನಾ/ವಿ.ಕೀ), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಡೊಮಿನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಕೇಶ್ ಮೋಟಿ

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

Advertisement
Advertisement

Udayavani is now on Telegram. Click here to join our channel and stay updated with the latest news.

Next