ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ತಂಡದ ನಾಯಕನ ಪಟ್ಟ ನೀಡಲಾಗಿದೆ.
ಬಿಸಿಸಿಐ ಏಕದಿನ ತಂಡವನ್ನು ಶುಕ್ರವಾರ ಪ್ರಕಟಿಸಿದ್ದು,ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿದಿರುವ ಕಾರಣ ರಾಹುಲ್ ಅವರನ್ನು ಏಕದಿನ ಸರಣಿಗೆ ನಾಯಕರನ್ನಾಗಿ ಹೆಸರಿಸಿದೆ.
ತಂಡ ಇಂತಿದೆ
ಕೆಎಲ್ ರಾಹುಲ್ (ನಾಯಕ),ಜೆ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ ( ವಿಕೆಟ್ ಕೀಪರ್), ವೈ ಚಾಹಲ್, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಜನವರಿ 19 ರಂದು ಮೊದಲ ಏಕದಿನ,ಜನವರಿ 21 ರಂದು,ದ್ವಿತೀಯ ಏಕದಿನ ಮತ್ತು ಜನವರಿ 23 ರಂದು ಮೂರನೇ ಏಕದಿನ ಪಂದ್ಯಗಳು ನಡೆಯಲಿವೆ.