Advertisement

ತ್ರಿವಿಧ ದಾಸೋಹಿಗೆ ಜಿಲ್ಲಾದ್ಯಂತ ಅಶ್ರುತರ್ಪಣ

05:58 AM Jan 24, 2019 | |

ಹೊನ್ನಾಳಿ: ನ್ಯಾಮತಿ ತಾಲೂಕು ಕೇಂದ್ರದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಮತ್ತು ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಾರಂಭ ರದ್ದುಗೊಳಿಸಿ ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Advertisement

ಬೆಳಿಗ್ಗೆ 11.30ಕ್ಕೆ ಹೊನ್ನಾಳಿ ತಾಲೂಕು ಕೇಂದ್ರದಲ್ಲಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 3ಕ್ಕೆ ನ್ಯಾಮತಿಯಲ್ಲಿ ಕಾರ್ಯಕ್ರಮ ಎಂದು ಪೂರ್ವಭಾವಿಯಾಗಿ ನಿಗದಿಗೊಳಿಸಲಾಗಿತ್ತು. ಹೊನ್ನಾಳಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಶ್ರೀಗಳು ಲಿಂಗೈಕ್ಯರಾದ ಸುದ್ದಿ ಬಿತ್ತರವಾಯಿತು. ನ್ಯಾಮತಿ ತಾಲೂಕು ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮ ರದ್ದುಗೊಳಿಸಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಅದೇ ವೇದಿಕೆಯಲ್ಲಿ ಮೌನಾಚರಿಸಿ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಶಾಸಕ ಡಾ| ಡಿ.ಬಿ ಗಂಗಪ್ಪ, ತಾ.ಪಂ ಉಪಾಧ್ಯಕ್ಷ ಎಸ್‌.ಪಿ. ರವಿಕುಮಾರ್‌, ಜಿ.ಪಂ ಸದಸ್ಯರಾದ ಉಮಾ ರಮೇಶ್‌, ಎಂ.ಆರ್‌. ಮಹೇಶ್‌, ಉಪತಹಶೀಲ್ದಾರ್‌ ನಾಗರಾಜ್‌ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next