Advertisement

ಹುತಾತ್ಮರ ಪಾರ್ಥಿವ ಶರೀರಕ್ಕೆ ಕಣ್ಣೀರ ನಮನ

12:30 AM Feb 16, 2019 | |

ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾಲಂ ತಾಂತ್ರಿಕ ಪ್ರದೇಶಕ್ಕೆ ಶುಕ್ರವಾರ ಸಂಜೆ ತರಲಾಯಿತು. ಗೃಹ ಸಚಿವ ರಾಜನಾಥ್‌ ಸಿಂಗ್‌ ಮೃತದೇಹಗಳನ್ನು ಸ್ವೀಕರಿಸಿದರು. ರಾಷ್ಟ್ರಧ್ವಜದಲ್ಲಿ ಪಾರ್ಥಿವ ಶರೀರಗಳನ್ನು ಸುತ್ತಿ, ಸಾಲಾಗಿ ಇಡಲಾಗಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌, ನೌಕಾಪಡೆ ಮುಖ್ಯಸ್ಥ ಸುನೀಲ್‌ ಲಾಂಬಾ, ವಾಯುಪಡೆ ಮುಖ್ಯಸ್ಥ ಬಿ.ಎಸ್‌ ಧನೋವಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಸೇರಿದಂತೆ ಅನೇಕರು ಹಾಜರಿದ್ದು, ಮಡಿದ ಯೋಧರಿಗೆ ಅಂತಿಮ ವಿದಾಯ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವು ಸಚಿವರು ಹಾಗೂ ಗಣ್ಯರು ಪಾಲಂಗೆ ತೆರಳಿ ಅಂತಿಮ ನಮನ ಸಲ್ಲಿಸಿದರು. 

Advertisement

ಸೇನಾ ವಾಹನ ಸಂಚಾರ ರದ್ದು: ದಾಳಿ ಹಿನ್ನೆಲೆಯಲ್ಲಿ ಶುಕ್ರವಾರದ ಮಟ್ಟಿಗೆ ಕಾಶ್ಮೀರ ಕಣಿವೆಯಲ್ಲಿ ಸೇನಾ ಪಡೆಗಳ ಸಂಚಾರ ರದ್ದು ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಂತರ್‌ ಜಿಲ್ಲೆ, ಅತ್ಯಂತ ದುರ್ಗಮ ಸ್ಥಳಗಳಿಗೆ ಸೇನೆಯ ವಾಹನ ಸಂಚಾರ ಬೇಡ ಎಂದು ಗೃಹ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next