Advertisement

ಸುರಂಗದಲ್ಲಿ ತಾಂತ್ರಿಕ ಪರೀಕ್ಷೆ; 16ರವರೆಗೆ ಮೆಟ್ರೋ ಸೇವೆ ವ್ಯತ್ಯಯ

12:04 PM Apr 12, 2017 | Team Udayavani |

ಬೆಂಗಳೂರು: ಮೆಟ್ರೋ ಉತ್ತರ-ದಕ್ಷಿಣ ಕಾರಿಡಾರ್‌ನ ಸುರಂಗ ಮಾರ್ಗದಲ್ಲಿ ರೈಲು ಸಂಚಾರ, ಸಿಗ್ನಲಿಂಗ್‌ ಸೇರಿದಂತೆ ಮತ್ತಿತರ ತಾಂತ್ರಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಏಪ್ರಿಲ್‌ 13-16ರವರೆಗೆ ಪ್ರಯಾಣಿಕರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Advertisement

ಏಪ್ರಿಲ್‌ 13ರಿಂದ 16ರವರೆಗೆ ಶ್ರೀರಾಮಪುರ, ಕುವೆಂಪು ರಸ್ತೆ ಮತ್ತು ಮಂತ್ರಿಸ್ಕ್ವೇರ್‌ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಲಭ್ಯ ಇರುವುದಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್‌)ವರೆಗೆ ಬಸ್‌ ಸೇವೆ ಒದಗಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ತಿಳಿಸಿದೆ. 

ಉತ್ತರ-ದಕ್ಷಿಣ ಕಾರಿಡಾರ್‌ ಮಾರ್ಗವನ್ನು ಶೀಘ್ರವೇ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುಧಿವುದಾಗಿ ತಿಳಿಸಿರುವ ನಿಗಮ, ಈ ಸಂಬಂಧ ನ್ಯಾಷನಲ್‌ ಕಾಲೇಜು-ಸಂಪಿಗೆರಸ್ತೆ ನಡುವಿನ ಸುರಂಗ ಮಾರ್ಗದಲ್ಲಿ ಹಲವು ತಾಂತ್ರಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ನಾಗಸಂದ್ರದಿಂದ ರಾಜಾಜಿನಗರಧಿವರೆಗೆ ಮೆಟ್ರೋ ರೈಲು ಸೇವೆ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next