Advertisement

Protest: ಬೇಕೇ ಬೇಕು ನೀರು ಬೇಕು.. ಖಾಲಿ ಕೊಡಪಾನ ಹಿಡಿದು ಗ್ರಾಮಪಂಚಾಯಿತಿ ಎದುರು ಪ್ರತಿಭಟನೆ

11:54 AM Jan 11, 2024 | Team Udayavani |

ತೀರ್ಥಹಳ್ಳಿ : ತಾಲೂಕಿನ ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಅಗ್ರಹಾರ ಗ್ರಾಮಕ್ಕೆ ಕಳೆದ 10 – 15 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದೆ ಉದ್ದಟತನದಿಂದ ವರ್ತಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಹೊಸ ಅಗ್ರಹಾರ ಗ್ರಾಮಸ್ಥರು ಗ್ರಾಮಪಂಚಾಯಿತಿ ಎದುರೇ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಬೇಕೇ ಬೇಕು ಕುಡಿಯುವ ನೀರು ಬೇಕು, ಹೋರಾಟ ಹೋರಾಟ ನೀರಿಗಾಗಿ ಹೋರಾಟ ಎಂದು ಖಾಲಿ ಕೊಡಪಾನ ಮತ್ತು 200 ಲೀಟರ್ ಡ್ರಮ್ ಗಳನ್ನು ಇಟ್ಟುಕೊಂಡು ಗ್ರಾಮದ ಗ್ರಾಮಸ್ಥರು ಮೂಲ ಸೌಕರ್ಯಕ್ಕಾಗಿ ಹಾಗೂ ಶುದ್ಧ ಕುಡಿಯುವ ನೀರು ಗ್ರಾಮಕ್ಕೆ ಸಿಗುವವರೆಗೂ ಅನಿರ್ದಿಷ್ಟಾವಧಿಯ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಅನೇಕ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: Kottigehara: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ… ಕಂಗಾಲಾದ ವಾಹನ ಸವಾರರು

Advertisement

Udayavani is now on Telegram. Click here to join our channel and stay updated with the latest news.

Next