Advertisement

ಬಸವನಗುಡಿಯ ಪಾರ್ಕ್‌ಗಳಲ್ಲಿ ತೇಜಸ್ವಿ ಸೂರ್ಯ ಪ್ರಚಾರ

12:24 AM Apr 10, 2019 | Lakshmi GovindaRaju |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು ಕಂಡಾಕ್ಷಣ ಪಾರ್ಕ್‌ಗಳಲ್ಲಿ ವಾಕಿಂಗ್‌, ಜಾಗಿಂಗ್‌ ಮಾಡುತ್ತಿದ್ದ ಬೆಂಬಲಿಗರು ಮೋದಿ, ಮೋದಿ ಎಂದು ಜಯಕಾರ ಹಾಕುತ್ತಾ ತೇಜಸ್ವಿ ಸೂರ್ಯರವರ ಬಳಿ ಬಂದು ಬೆಂಬಲ ಸೂಚಿಸಿದರು.

Advertisement

ಕೆಲವರು ಬಿಜೆಪಿ ಕರಪತ್ರಗಳನ್ನು ಪಡೆದು ತಾವು ಹಂಚಲು ಮುಂದಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದರು. ಬಸವನಗುಡಿ ಶಾಸಕ ರವಿಸುಬ್ರಮಣ್ಯ, ಹನುಮಂತನಗರ ಬಿಬಿಎಂಪಿ ಸದಸ್ಯ ಕೆಂಪೇಗೌಡ, ವಿದ್ಯಾಪೀಠದ ಬಿಬಿಎಂಪಿ ಸದಸ್ಯೆ ಶ್ಯಾಮಲ ಸಾಯಿಕುಮಾರ್‌, ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಉದ್ಯಾನವನಗಳಿಗೆ ಬೇಟಿ ನೀಡಿದ ತೇಜಸ್ವಿ ಸೂರ್ಯ ಮತದಾರರಲ್ಲಿ ಮತಯಾಚನೆ ನಡೆಸಿದರು.

ಆರಂಭದಲ್ಲಿ ದೊಡ್ಡ ಗಣಪತಿ ದೇವಸ್ಥಾನದ ಬಳಿಯ ಬ್ಯೂಗಲ್‌ ರಾಕ್‌ ಪಾರ್ಕ್‌, ನಂತರ ಹರಿಹರ ಗುಡ್ಡ ಪಾರ್ಕ್‌, ಅಲ್ಲಿಂದ ಚೆನ್ನಮ್ಮನ ಕೆರೆ ಪಾರ್ಕ್‌ ಗಳಿಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಪಾರ್ಕ್‌ನಲ್ಲಿದ್ದ ನಾಗರಿಕರನ್ನು ಬೇಟಿಯಾಗಿ ಸ್ವತ್ಛ ಮತ್ತು ಹಸಿರುಮಯ ಬೆಂಗಳೂರಿಗಾಗಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಕರಿಸಬೇಕೆಂದು ಕೋರಿದರು. ಉದ್ಯಾನವನಗಳಲ್ಲಿ ಮತಯಾಚಿಸಿದ ನಂತರ ಬಿಜೆಪಿ ಕಾರ್ಯಕರ್ತರು, ಸ್ವಯಂಸೇವಕರಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಿಜೆಪಿಯ ಸಂಕಲ್ಪ ಪತ್ರ ನೀಡಿ ಜಾಗೃತಿ ಮೂಡಿಸಲು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next