Advertisement

ತೇಜಸ್ವಿನಿ ನಡೆ ಇನ್ನೂ ನಿಗೂಢ

12:27 AM Apr 09, 2019 | Team Udayavani |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ತೇಜಸ್ವಿನಿ ಅನಂತ ಕುಮಾರ್‌ ಅವರು ಪ್ರಚಾರ ನಡೆಸುವರೇ ಎಂಬುದು ಇನ್ನೂ ನಿಗೂಢವಾಗಿಯೇ ಇದ್ದು, ಅವರ ಬೆಂಬಲಿಗರು, ಕಾರ್ಯಕರ್ತರದಲ್ಲಿ ಗೊಂದಲ ಮುಂದುವರಿದಿದೆ.

Advertisement

ಸೋಮವಾರ ಸಂಜೆ ಕೆಲವೆಡೆ ತೇಜಸ್ವಿನಿ ಅವರು ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂಬುದಾಗಿ ಕೆಲ ಬಿಜೆಪಿ ಮುಖಂಡರು ನಿರೀಕ್ಷಿಸಿದ್ದರು. ಆದರೆ ತೇಜಸ್ವಿನಿಯವರು ಪ್ರಚಾರದಲ್ಲಿ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡರು. ಪ್ರಧಾನಿ ನರೇಂದ್ರ ಮೋದಿಯವರು ಏ.13ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಆ ಸಭೆಯಲ್ಲಿ ತೇಜಸ್ವಿನಿಯವರು ಪಾಲ್ಗೊಳ್ಳುವರೇ ಎಂಬ ಪ್ರಶ್ನೆ ಮೂಡಿಸಿದೆ.

ಸ್ಪರ್ಧೆಗೆ ಅವಕಾಶ ಸಿಗದಿರುವುದಕ್ಕಿಂತ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಿದ್ದರಿಂದ ಮನನೊಂದಿದ್ದ ತೇಜಸ್ವಿನಿ ಅನಂತ ಕುಮಾರ್‌ ಅವರು ಪಕ್ಷದ ಪರ ಪ್ರಚಾರದಿಂದ ದೂರವೇ ಉಳಿದಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಡೆಸಿದ ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರಿಂದ ಪ್ರಚಾರದಲ್ಲಿ ಸಕ್ರಿಯವಾಗುವ ನಿರೀಕ್ಷೆ ಇತ್ತು. ಆದರೆ ನಂತರ ತೇಜಸ್ವಿನಿಯವರು ಪ್ರಚಾರದಲ್ಲೆಲ್ಲೂ ಕಾಣಿಸಿಕೊಂಡಿಲ್ಲ.

ಎರಡು ದಿನ ಅಶೋಕ್‌ ರೋಡ್‌ ಶೋ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರು ಏ.10 ಹಾಗೂ 11ರಂದು ಎರಡು ದಿನ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿ ಮತ ಯಾಚಿಸಲಿದ್ದಾರೆ. ನಿತ್ಯ ಬೆಳಗ್ಗೆ ಹಾಗೂ ಸಂಜೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳಂತೆ ಎರಡು ದಿನದಲ್ಲಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next