Advertisement

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

06:24 PM Apr 23, 2024 | Team Udayavani |

ಹೈದರಾಬಾದ್: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮನೈರ್ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಸೋಮವಾರ ತಡರಾತ್ರಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ರಾತ್ರಿಯ ವೇಳೆ ನಡೆದ ಅವಘಡದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Advertisement

ಈ ಸೇತುವೆಯು ಪೆದ್ದಪಲ್ಲಿ ಜಿಲ್ಲೆಯ ಒಡೆಡುವನ್ನು ಜಯಶಂಕರ್ ಭೂಲಪಲ್ಲಿ ಜಿಲ್ಲೆಯ ಗರ್ಮಿಲಪಲ್ಲಿಗೆ ಸಂಪರ್ಕಿಸಲು ಉದ್ದೇಶಿಸಲಾಗಿತ್ತು ಮತ್ತು 2016 ರಿಂದ ನಿರ್ಮಾಣಕಾರ್ಯ ನಡೆಯುತ್ತಿತ್ತು. ಆದರೆ, ಗುತ್ತಿಗೆದಾರರ ಬದಲಾವಣೆ ಹಾಗೂ ಅಸಮರ್ಪಕ ಅನುದಾನದಿಂದ ನಿರ್ಮಾಣ ಪ್ರಕ್ರಿಯೆ ವಿಳಂಬವಾಗಿದೆ ಎಂದು ಹೇಳಲಾಗಿದೆ.

ಸೋಮವಾರ ರಾತ್ರಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸೇತುವೆ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.

2016ರಲ್ಲಿ ಆರಂಭಗೊಂಡರೂ ಸೇತುವೆ ಕಾಮಗಾರಿಯನ್ನು ಪದೇ ಪದೇ ಮುಂದೂಡುತ್ತಿರುವುದರಿಂದ ಸ್ಥಳೀಯರು ನಿರಾಸೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಜನೆಯ ಅಂದಾಜು ವೆಚ್ಚ ಆರಂಭದಲ್ಲಿ 46 ಕೋಟಿ ರೂ. ಎಂದು ಹೇಳಲಾಗುತ್ತಿತ್ತು ಆದರೆ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿ ಎಂಟು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವ ಬಗ್ಗೆ ಸ್ಥಳೀಯರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅದೂ ಅಲ್ಲದೆ ಸೇತುವೆ ಕಾಮಗಾರಿ ನಿರ್ಮಾಣಗೊಳ್ಳುತ್ತಿರುವಾಗಲೇ ಸೇತುವೆ ಕುಸಿದು ಬಿದ್ದಿರುವುದರ ಹಿಂದೆ ಅವ್ಯವಹಾರ ನಡೆದಿರುವ ಕುರಿತು ಊರಿನ ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಬಲವಾದ ನಿಯಮಗಳು ಮತ್ತು ಮೇಲ್ವಿಚಾರಣೆಯ ತುರ್ತು ಅಗತ್ಯವನ್ನು ಇದು ಒತ್ತಿಹೇಳುತ್ತದೆ.

ಇದನ್ನೂ ಓದಿ: Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next