Advertisement

Telangana Election; ಚುನಾವಣಾ ರ‍್ಯಾಲಿಯಲ್ಲಿ ಬಿಆರ್ ಎಸ್ ಅಭ್ಯರ್ಥಿಗೆ ಚೂರಿ ಇರಿತ

03:58 PM Oct 30, 2023 | Team Udayavani |

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಹಾಲಿ ಸಂಸದ ಮತ್ತು ಬಿಆರ್ ಎಸ್ ಪಕ್ಷದ ಅಭ್ಯರ್ಥಿ ಕೋತಾ ಪ್ರಭಾಕರ್ ರೆಡ್ಡಿ ಅವರಿಗೆ ಚೂರಿ ಇರಿದ ಘಟನೆ ಸೋಮವಾರ ನಡೆದಿದೆ. ಸುರಂಪಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಪ್ರಭಾಕರ ರೆಡ್ಡಿ ಅವರ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ.

Advertisement

ದಾಳಿ ಮಾಡಿದವನನ್ನು ಶೀಘ್ರವಾಗಿ ಬಂಧಿಸಲಾಯಿತು. ಅಲ್ಲದೆ ರೆಡ್ಡಿ ಬೆಂಬಲಿಗರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಸಂಸದ ರೆಡ್ಡಿ ಅವರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೋತಾ ಪ್ರಭಾಕರ ರೆಡ್ಡಿ ಅವರು ಸಂಸದರಾಗಿದ್ದಾರೆ. ಅಲ್ಲದೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ದುಬ್ಬಾಕ್ ಕ್ಷೇತ್ರದಿಂದ ಬಿಆರ್‌ಎಸ್ ಪಕ್ಷದಿಂಧ ಕಣಕ್ಕಿಳಿದಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ದಾಳಿಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ರಾಜ್ಯದಲ್ಲಿ ಅಭ್ಯರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಡಿಜಿಪಿಗೆ ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next