Advertisement

Telangana ಎನ್‌ಕೌಂಟರ್‌: ಓರ್ವ ನಕ್ಸಲೀಯನ ಹತ್ಯೆ

12:37 AM Jul 26, 2024 | Team Udayavani |

ಹೈದರಾಬಾದ್‌: ತೆಲಂಗಾಣದ ಭದ್ರಾದ್ರಿ-ಕೊತ್ತಗುಡೆಂ ಮತ್ತು ಮುಲುಗು ಜಿಲ್ಲೆಯ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್‌ ಮೃತಪಟ್ಟಿದ್ದಾನೆ. ಗುರುವಾರ ನಡೆದ ಈ ಕಾರ್ಯಾಚರಣೆಯಲ್ಲಿ 10 ಮಂದಿ ನಕ್ಸಲರು ಇದ್ದರು ಎಂದು ಮಾಹಿತಿ ದೊರೆತಿದೆ. ಗುರುವಾರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸರ ಮೇಲೆ ನಿಷೇಧಿತ ಸಿಪಿಐ ಸಂಘಟನೆಯ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಪ್ರತಿದಾಳಿ ನಡೆಸಿದಾಗ ಓರ್ವ ನಕ್ಸಲ್‌ ಮೃತಪಟ್ಟಿದ್ದಾನೆ. ಸ್ಥಳದಿಂದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next