Advertisement

Election Commission ತೆಲಂಗಾಣ: ಕರ್ನಾಟಕದ ಜಾಹೀರಾತು ನಿಷೇಧ

12:45 AM Nov 28, 2023 | Team Udayavani |

ಹೈದರಾಬಾದ್‌: ತೆಲಂಗಾಣದ ದಿನಪತ್ರಿಕೆಗಳಲ್ಲಿ ಕರ್ನಾಟಕದ ಕಾಂಗ್ರೆಸ್‌ ಸರಕಾರ ನೀಡುತ್ತಿದ್ದ ಜಾಹೀರಾತುಗಳಿಗೆ ಚುನಾವಣ ಆಯೋಗ ಸೋಮವಾರ ನಿಷೇಧ ಹೇರಿದೆ.

Advertisement

ವಿಧಾನಸಭೆ ಚುನಾವಣೆಯ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್‌ ಪಕ್ಷವು ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಚುನಾವಣ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಆಯೋಗ ಕರ್ನಾಟಕದ ಜಾಹೀರಾತಿಗೆ ನಿರ್ಬಂಧ ವಿಧಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರವು ಕರ್ನಾಟಕದಲ್ಲಿ ಮಾಡಿರುವ ಸಾಧನೆಗಳು, ಗ್ಯಾರಂಟಿಗಳ ಅನುಷ್ಠಾನ ಕುರಿತು ತೆಲಂಗಾಣದ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗುತ್ತಿತ್ತು. ಆದರೆ ನಮ್ಮ ಅನುಮತಿ ಪಡೆಯದ ಕಾರಣ ಜಾಹೀರಾತಿಗೆ ನಿಷೇಧ ಹೇರುತ್ತಿದ್ದೇವೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಇದೇ ಗುರುವಾರ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿ. 3ರಂದು ಫ‌ಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next