Advertisement

ಕಾರ್ಕಳ ಮಿಯ್ಯಾರು ಬಳಿ ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪು ಡಿಕ್ಕಿ

12:31 PM Jun 24, 2023 | Team Udayavani |

ಕಾರ್ಕಳ: ತೆಲಂಗಾಣದ ಶಾಸಕರೊಬ್ಬರು ಮಂಗಳೂರಿನಿಂದ ಶೃಂಗೇರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅವರ ಜೀಪು ಕಾರ್ಕಳದ ಮಿಯ್ಯಾರು ಬಳಿ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಶನಿವಾರ ನಡೆದಿದೆ. ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.

Advertisement

ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರು ಗಾಯಗಳಿಲ್ಲದೆ ಪಾರಾಗಿದ್ದಾರೆ.

ಇದನ್ನೂ ಓದಿ:AliExpress: ಆರ್ಡರ್‌ ಮಾಡಿದ 4 ವರ್ಷದ ಬಳಿಕ ಬಂತು ಪ್ರಾಡಕ್ಟ್; ಗ್ರಾಹಕನ ಪೋಸ್ಟ್‌ ವೈರಲ್

ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂಗೊಂಡಿದೆ.

Advertisement

ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next