Advertisement

Police station ನಲ್ಲಿ ಮೂರ್ಛೆ ರೋಗ; ವಿಚಾರಣೆಗೆ ಕರೆತಂದ ಯುವಕ ಮೃತ್ಯು

06:44 PM Aug 28, 2023 | Team Udayavani |

ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದಾಗ ಮೂರ್ಛೆ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಬೆಳ್ಳಂಪಲ್ಲಿ ಪಟ್ಟಣದ ಟೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ 26 (ಶನಿವಾರ) ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸೋಮವಾರ ದೃಶ್ಯಗಳು ಹೊರಬಿದ್ದಿವೆ.

ಕೀರ್ತಿ ಅಂಜಿ (25) ಎಂಬಾತನನ್ನು ಮಹಿಳೆಯೊಬ್ಬಳ ಮನೆಯ ಮೇಲೆ ಕಲ್ಲು ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಠಾಣೆಯಲ್ಲಿ ಕುರ್ಚಿಯ ಮೇಲೆ ಕುಳಿತು ಮೊಬೈಲ್ ಬಳಸುತ್ತಿದ್ದಾಗ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು ಇಬ್ಬರು ಪೊಲೀಸರು ಯುವಕರ ಬಳಿ ಬಂದು ಆತನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದು ವಿಡಿಯೋ ಕ್ಲಿಪ್‌ನಲ್ಲಿದೆ.  ಆತನನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆಯೇ ಎಂಬುದು ತತ್ ಕ್ಷಣಕ್ಕೆ ತಿಳಿದುಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next