Advertisement

ತೇಲ್ಕೂರ್‌ ಹೇಳಿಕೆಗೆ ಭುಗಿಲೆದ್ದ ಆಕ್ರೋಶ

05:26 PM Aug 18, 2022 | Team Udayavani |

ಚಿಂಚೋಳಿ: ಕಾಂಗ್ರೆಸ್‌ ಪಕ್ಷದ ಮಾಧ್ಯಮ ಸಂಹವನ ವಕ್ತಾರ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ವಿರುದ್ಧ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೀಡಿರುವ ಕೀಳುಮಟ್ಟದ ಹೇಳಿಕೆ ಖಂಡಿಸಿ ಪಟ್ಟಣದ ಬಸ್‌ನಿಲ್ದಾಣ ಹತ್ತಿರ ಬ್ಲಾಕ್‌ ಕಾಂಗ್ರೆಸ್‌ ಎಸ್‌ಸಿ ಘಟಕ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆತಡೆ ನಡೆಸಿ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.

Advertisement

ಹಿರಿಯ ಮುಖಂಡ ಗೋಪಾಲರಾವ್‌ ಕಟ್ಟಿಮನಿ ಮಾತನಾಡಿ, ಶಾಸಕ ಪ್ರಿಯಾಂಕ್‌ ಖರ್ಗೆ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಲಂಚ-ಮಂಚದ ವಾಸ್ತವ ಸ್ಥಿತಿಗತಿ ಬಗ್ಗೆ ಆಡಳಿತ ಪಕ್ಷವನ್ನು ಟೀಕಿಸಿ ಮಾತನಾಡಿದ್ದಾರೆಯೇ ಹೊರತು ಯಾರಿಗೂ ವೈಯಕ್ತಿಕವಾಗಿ ಅವಹೇಳಕಾರಿಯಾಗಿ ಮಾತನಾಡಿಲ್ಲ. ಆದರೆ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಖರ್ಗೆಯವರ ಕುಟುಂಬದ ಟೀಕೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಅವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಎಸ್‌ಸಿ ಘಟಕ ಅಧ್ಯಕ್ಷ ಸಂತೋಷ ಗುತ್ತೇದಾರ ಮಾತನಾಡಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪುರಸಭೆ ಸದಸ್ಯ ಅನ್ವರ್‌ ಖತೀಬಸಾಬ್‌, ಅಬ್ದುಲ್‌ ಬಾಸೀತ, ಸುರೇಶ ಬಂಟಾ ಮಾತನಾಡಿದರು. ಕಾಂಗ್ರೆಸ್‌ ಮುಖಂಡರಾದ ಶಬ್ಬೀರ ಅಹ್ಮದ್‌ ಹಾದಿಸಾಬ್‌, ಲೋಕೇಶ, ಅನಿಲಕುಮಾರ ಜಮಾದಾರ, ವಿಶ್ವನಾಥ ಬೀರನಳ್ಳಿ, ವಾಮನರಾವ ಕೊರವಿ, ಶಂಕರ ಕುಸಾಳೆ, ಮೇಘರಾಜ ರಾಠೊಡ, ಗೌತಮ ಹಸರಗುಂಡಗಿ, ಆನಂದ ಗುರಂಪಳ್ಳಿ, ಶರಣು ರುಸ್ತಂಪೂರ, ವಿಶ್ವನಾಥ ದಸ್ತಾಪೂರ, ವಾಮನರಾವ ಕೊರವಿ ಇನ್ನಿತರರಿದ್ದರು. ನಂತರ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಚಿಂಚೋಳಿ ಠಾಣೆ ಪಿಎಸ್‌ಐ ಮಂಜುನಾಥ ರೆಡ್ಡಿಗೆ ಸಲ್ಲಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next