Advertisement

ನಿಲುವಳಿ ಸೂಚನೆ ಮಂಡಿಸುವುದು ಏಕೆ ಹೇಳಿ?: ಸಭಾಧ್ಯಕ್ಷರಿಗೆ ಸಿದ್ದರಾಮಯ್ಯ ಪ್ರಶ್ನೆ

03:57 PM Sep 13, 2022 | Team Udayavani |

ಬೆಂಗಳೂರು: ನಿಲುವಳಿ ಸೂಚನೆಯ ಪ್ರಾಥಮಿಕ ಚರ್ಚೆಗೆ ಅವಕಾಶ ನೀಡದೆ ಪ್ರಸ್ತಾಪವನ್ನು ನೇರವಾಗಿ ನಿಯಮ 69ಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬದಲಾಯಿಸಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

Advertisement

ರಾಜ್ಯದಲ್ಲಿ ಅತಿವೃಷ್ಟಿಯಿಂದ ಆದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕೆ ನಿಯಮ 60 ರ ಅನ್ವಯ ನಿಲುವಳಿ ಸೂಚನೆಗೆ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ್ದರು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಕೂಡಾ ಪ್ರಸ್ತಾಪ ಕಳುಹಿಸಿರುವುದರಿಂದ ನಿಲುವಳಿ ಸೂಚನೆಯನ್ನು ನಿಯಮ 69ಕ್ಕೆ ಪರಿವರ್ತಿಸಿ ಚರ್ಚೆ ನಡೆಸೋಣ. ನೀವು ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಕಾಗೇರಿ ಸೂಚಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಿಯಮಾವಳಿ ಪ್ರಕಾರ ನಿಲುವಳಿ ಸೂಚನೆ ಮಂಡನೆಗೆ ಪೂರ್ವಭಾವಿಯಾಗಿ ಪ್ರಾಸ್ತವಿಕ ಮಾತಿಗೆ ಅವಕಾಶ ನೀಡಬೇಕು. ಆದರಡ ನೀವು ಏಕಾಏಕಿ ಪರಿವರ್ತನೆ ಮಾಡಿದರೆ ನಿಯಮ ಉಲ್ಲಂಘನೆಯಾಗುತ್ತದೆ? ಇದು ಸದಸ್ಯರ ಹಕ್ಕನ್ನು ಮೊಟಕುಗೊಳಿಸಿದಂತಲ್ಲವೇ ? ಎಂದು ಪ್ರಶ್ನಿಸಿದರು.

ಆಗ ಮಧ್ಯ ಪ್ರವೇಶ ಮಾಡಿದ ಸಿಎಂ ಬೊಮ್ಮಾಯಿ ನಿಲುವಳಿ ಸೂಚನೆ ಮಂಡನೆಯಾದರೆ ಯಾರು ಪ್ರಸ್ತಾಪಕ್ಕೆ ಸಹಿ ಹಾಕಿದ್ದಾರೋ ಅವರು ಮಾತ್ರ ಮಾತನಾಡುತ್ತಾರೆ. ಆದರೆ ನಿಯಮ 69 ಆದರೆ ಎಲ್ಲ ಶಾಸಕರೂ ಚರ್ಚೆಯಲ್ಲಿ ಮಾತನಾಡಬಹುದು ಎಂದು ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ:ಉಡುಪಿಯಲ್ಲಿ ಪೈಲಟ್‌ ಯೋಜನೆ; ತಂಬಾಕು ಮುಕ್ತ ಅಪಾರ್ಟ್‌ಮೆಂಟ್‌

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಎರಡೂ ಪ್ರಸ್ತಾಪವನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಸಿದ್ದರಾಮಯ್ಯ ಚರ್ಚೆ ಪ್ರಾರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next