Advertisement

ಸರ್ಕಾರದ ಸಾಧನೆಗಳನ್ನು ಕಾರ್ಮಿಕರಿಗೆ ತಿಳಿಸಿ

12:27 PM Feb 19, 2018 | Team Udayavani |

ಬೆಂಗಳೂರು: ಪಕ್ಷದ ಗೆಲುವಿನಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ ಎಂದು ಇಂಟಕ್‌ ರಾಷ್ಟ್ರೀಯ ಅಧ್ಯಕ್ಷ ಸಂಜೀವ್‌ ರೆಡ್ಡಿ ಹೇಳಿದ್ದಾರೆ. ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ರಾಜ್ಯಮಟ್ಟದ ಇಂಡಿಯನ್‌ ನ್ಯಾಷನಲ್‌ ಟ್ರೇಡ್‌ ಯುನಿಯನ್‌ ಕಾಂಗ್ರೆಸ್‌ನ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಡವರಿಗೆ ಯಾವುದೇ ರೀತಿಯ ಯೋಜನೆ ರೂಪಿಸಿಲ್ಲ. ಕಾಂಗ್ರೆಸ್‌ ಪಕ್ಷ ಮಾತ್ರ ಬಡವರ ಪರವಾಗಿ ಕೆಲಸ ಮಾಡುತ್ತದೆ ಎಂದರು.

Advertisement

ಪ್ರಧಾನಿ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ಹೇಳಿದ್ದರು. ಆದರೆ, ಅವರು ಮಾತ್ರ ದುಬಾರಿ ಬಟ್ಟೆ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಬಡವರ ಪರವಾಗಿ ಯಾವುದೇ ಕೆಲಸ ಮಾಡಿಲ್ಲ ಎಂದು ಹೇಳಿದರು. 

ಇಂಟಕ್‌ ರಾಜ್ಯಾಧ್ಯಕ್ಷ ರಾಕೇಶ್‌ ಮಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿನಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಪಕ್ಷ ಇಂಟಕ್‌ ಘಟಕವನ್ನೂ ಚುನಾವಣೆ ಸಂದರ್ಭದಲ್ಲಿ ಪರಿಗಣಿಸಿ, ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ನ್ಯಾಷನಲ್‌ ಟ್ರೇಡ್‌ ಯುನಿಯನ್‌ ರಾಷ್ಟ್ರೀಯ ಅಧ್ಯಕ್ಷರಾದ ಸಂಜೀವ್‌ ರೆಡ್ಡಿ ಅವರ 88 ನೇ ಹುಟ್ಟು ಹಬ್ಬದ ಪ್ರಯುಕ್ತ ಕೇಕ್‌ ಕತ್ತರಿಸಿ ಸನ್ಮಾನಿಸಲಾಯಿತು. 

Advertisement

Udayavani is now on Telegram. Click here to join our channel and stay updated with the latest news.

Next