Advertisement

ಮತದಾರರಿಗೆ ಕೇಂದ್ರದ ವೈಫ‌ಲ್ಯ ತಿಳಿಸಿ

07:41 AM Mar 11, 2019 | Team Udayavani |

ಕೆ.ಆರ್‌.ನಗರ: ಕೇಂದ್ರದ ಎನ್‌ಡಿಎ ಸರ್ಕಾರದ ವೈಫ‌ಲ್ಯಗಳನ್ನು ಜನರಿಗೆ ತಿಳಿಸಿ, ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮುಖಂಡರು ಮತ್ತು ಕಾರ್ಯಕರ್ತರು ಮತ ಯಾಚಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಧನ್‌ ಮನವಿ ಮಾಡಿದರು.

Advertisement

ತಾಲೂಕಿನ ಅಂಕನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಜನಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳ ಅವಧಿಯಲ್ಲಿ  ಕೇವಲ ಪ್ರಚಾರದಲ್ಲಿ ಕಾಲ ಕಳೆದಿರುವ ನರೇಂದ್ರ ಮೋದಿ ನಾಯಕತ್ವಕ್ಕೆ ದೇಶದ ಮತದಾರರು ಅಂತ್ಯ ಹಾಡಲಿದ್ದಾರೆ. ಸುಳ್ಳು ಹೇಳಿ ಹೆಚ್ಚು ದಿನ ಜನರನ್ನು ವಂಚಿಸಲು ಸಾಧ್ಯಲ್ಲ ಎಂದು ವಾಗ್ಧಾಳಿ ನಡೆಸಿದರು.

ದೇಶದ ಮತದಾರರು ರಾಹುಲ್‌ಗಾಂಧಿ ನಾಯಕತ್ವಕ್ಕೆ ಮನ್ನಣೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರೈತ ಮತ್ತು ಜನ ವಿರೋಧಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಅಂತಿಮ ದಿನಗಳು ಸಮೀಪಿಸುತ್ತಿದ್ದು, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು. ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿ.ರವಿಶಂಕರ್‌ ಅತ್ಯಂತ ಜನಾನುರಾಗಿ ನಾಯಕರಾಗಿದ್ದು, ಮುಂಬರುವ ಚುನಾವಣೆಯಲ್ಲಿ ಇವರನ್ನು ಗೆಲ್ಲಿಸಬೇಕು ಎಂದು ಕೋರಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ಜಯಕುಮಾರ್‌ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದ ಮತಗಳಿಂದ ಸೋತಿರುವ ಡಿ.ರವಿಶಂಕರ್‌ ಅವರಿಗೆ ಮುಂದೆ ಉಜ್ವಲ ರಾಜಕೀಯ ಭವಿಷ್ಯವಿದ್ದು, ಅವರನ್ನು ಶಾಸಕರನ್ನಾಗಿ ಮಾಡುವವರೆಗೂ ನಾವು ವಿರಮಿಸುವುದು ಬೇಡ ಎಂದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯ ಡಿ.ರವಿಶಂಕರ್‌, ಮಾಜಿ ಸದಸ್ಯ ಡಿ.ಬಿ.ತಮ್ಮೇಗೌಡ, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ಉಪಾಧ್ಯಕ್ಷ ಹಾಡ್ಯಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ರಾಮಾಚಾರಿ, ಹೊಸಕೋಟೆ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಕೆ.ಬಸವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಂ.ಎಸ್‌.ಮಹದೇವ್‌,

Advertisement

ಉದಯಶಂಕರ್‌, ತಾಲೂಕು ಕಾಂಗ್ರೆಸ್‌ ವಕ್ತಾರ ಸೈಯದ್‌ಜಾಬೀರ್‌, ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್‌.ಹೆಚ್‌.ನಾಗೇಂದ್ರ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಎನ್‌.ಸಿ.ಪ್ರಸಾದ್‌, ಕಾಂಗ್ರೆಸ್‌ ಮುಖಂಡರಾದ ಪ್ರಕಾಶ್‌, ವಿಶ್ವೇಶ್ವರಯ್ಯ, ಅಶ್ವಥ್‌, ಪರಮೇಶ್‌, ಜಯಪ್ಪ, ಅಣ್ಣೇಗೌಡ, ಮಹೇಶ್‌, ಮಹದೇವ್‌ ಮತ್ತಿತರರು ಹಾಜರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next