Advertisement

“ಇದು ನನ್ನ ಕೊನೆಯ ದಿನ.”. ಲೈವ್‌ ಬಂದು ಆತ್ಮಹತ್ಯೆ ಮಾಡಿಕೊಂಡ ಜನಪ್ರಿಯ ಕೊರಿಯೊಗ್ರಾಫ‌ರ್‌

11:29 AM May 01, 2023 | Team Udayavani |

ಹೈದರಾಬಾದ್: ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಭಾನುವಾರ (ಎ.30 ರಂದು) ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

Advertisement

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಟಾಲಿವುಡ್‌ ಟಿವಿರಂಗಕ್ಕೆ ದೊಡ್ಡ ಆಘಾತ ನೀಡಿದೆ.

ತನ್ನ ಕೊರಿಯೊಗ್ರಾಫಿ ಮೂಲಕ ಅಪಾರ ಅಭಿಮಾನಿ ಹಾಗೂ ಟಾಲಿವುಡ್‌ ಸಿನಿಮಾರಂಗಕ್ಕೂ ಚಿರಪರಿಚಿತರಾಗಿದ್ದ ಅವರು ಭಾನುವಾರ ನೆಲ್ಲೂರಿನ ಹೊಟೇಲ್‌ ವೊಂದರಲ್ಲಿ ಇದ್ದು ಇನ್ಸ್ಟಾಗ್ರಾಮ್‌ ಲೈವ್‌ ಬಂದಿದ್ದಾರೆ.

ಈ ವೇಳೆ ಅವರು ತಾವು ಕಷ್ಟದ ಬಗ್ಗೆ ಮಾತನಾಡಿದ್ದಾರೆ. “ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ ಕೋರುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ ಮತ್ತು ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದಲ್ಲ, ಅದನ್ನು ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನೀಗ ನಲ್ಲೂರಿನಲ್ಲಿದ್ದೇನೆ. ಇದು ನನ್ನ ಕೊನೆಯ ದಿನ. ಇನ್ನು ನಾನು ನನ್ನ ಸಾಲಗಳಿಂದ ಬರುವ ಸಮಸ್ಯೆಗಳನ್ನು ಎದುರಿಸಲು ಆಗುವುದಿಲ್ಲ” ಎಂದಿದ್ದಾರೆ.

ಲೈವ್ ಮುಗಿಸಿದ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಎಲ್ಲದಕ್ಕೂ ಸಾವೊಂದೇ ಪರಿಹಾರ ಅಲ್ಲ, ಈ ನಿರ್ಧಾರ ಸರಿಯಲ್ಲ ಎಂದು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next