Advertisement

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

02:26 PM Sep 30, 2024 | Team Udayavani |

ರಾಜಸ್ಥಾನ: ಚಿರತೆ ದಾಳಿಗೆ ರಾಜಸ್ಥಾನದ ಉದಯಪುರದಲ್ಲಿ ಚಿರತೆ ದಾಳಿ ಮತ್ತೆ ಮುಂದುವರೆದಿದೆ, ಸೋಮವಾರ (ಸೆ.30) ಮುಂಜಾನೆ ಇಲ್ಲಿನ ದೇವಾಲಯದ ಅರ್ಚಕರೊಬ್ಬರನ್ನು ಚಿರತೆ ಹೊತ್ತೊಯ್ದಿದೆ ಎಂದು ಹೇಳಲಾಗಿದ್ದು ಅವರ ಮೃತದೇಹ ಪಕ್ಕದ ಕಾಡಿನಲ್ಲಿ ಪತ್ತೆಯಾಗಿದೆ.

Advertisement

ಇದರೊಂದಿಗೆ ಕಳೆದ ಹನ್ನೊಂದು ದಿನದಲ್ಲಿ ಏಳು ಜನರ ಮೇಲೆ ಚಿರತೆ ದಾಳಿ ನಡೆಸಿರುವುದಾಗಿ ವರದಿಯಾಗಿದ್ದು ಗ್ರಾಮದ ಜನ ಭಯಭೀತರಾಗಿದ್ದಾರೆ.

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೆ.24ರಂದು ಚಿರತೆ ಹಿಡಿಯುವ ಅಭಿಯಾನ ಆರಂಭಿಸಿದ್ದು ಇಲ್ಲಿಯವರೆಗೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಅವುಗಳನ್ನು ಉದಯಪುರದ ಸಜ್ಜನ್‌ಗಢ ಜೈವಿಕ ಉದ್ಯಾನವನಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಆದರೆ ಈ ನಡುವೆ ಮತ್ತೆ ಗ್ರಾಮದಲ್ಲಿ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಲು ನಿರ್ಧರಿಸಿದ್ದಾರೆ.

ಹೆಚ್ಚುತ್ತಿರುವ ಚಿರತೆ ದಾಳಿಯಿಂದ ಸ್ಥಳೀಯರು ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಇದೇ ಕಾರಣದಿಂದ ಈ ಪ್ರದೇಶದ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ, ಜನರು ಸಂಜೆಯ ಬಳಿಕ ಮನೆಯಿಂದ ಹೊರಬರದಂತೆ ಒಂದು ವೇಳೆ ಬರುವುದಿದ್ದರೂ ಗುಂಪು ಗುಂಪಾಗಿ ಹೊರಗೆ ಹೋಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಅರಣ್ಯ ಪ್ರ್ರದೇಶಕ್ಕೆ ಒಂಟಿಯಾಗಿ ಹೋಗಬೇಡಿ ಮತ್ತು ಜಾನುವಾರುಗಳನ್ನು ಮೇಯಿಸುವಾಗ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸ್ಥಳೀಯರಿಗೆ ಮನವಿ ಮಾಡಿದೆ..

ಇದನ್ನೂ ಓದಿ: Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Advertisement
Advertisement

Udayavani is now on Telegram. Click here to join our channel and stay updated with the latest news.

Next