Advertisement

Temple Visit: ಕೊಲ್ಲೂರಿನಲ್ಲಿ ಕೇರಳ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌

01:52 AM Sep 01, 2024 | Team Udayavani |

ಕೊಲ್ಲೂರು: ಕೇರಳದ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಅವರು ಆ.31ರಂದು ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Advertisement

ದೇಗುಲದ ಅರ್ಚಕರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ಕುಂದಾಪುರ ಉಪಕಮಿಷನರ್‌ ಮಹೇಶ್ಚಂದ್ರ, ದೇಗುಲದ ಕಾರ್ಯನಿರ್ವಹಣಾ ಧಿಕಾರಿ ಪ್ರಶಾಂತಕುಮಾರ್‌ ಶೆಟ್ಟಿ, ಬೈಂದೂರು ತಹಶೀಲ್ದಾರ್‌ ಪ್ರದೀಪ್‌, ಡಿವೈಎಸ್‌ಪಿ ಬೆಳ್ಳಿಯಪ್ಪ, ಅರ್ಚಕರು, ಸಿಬಂದಿ ಉಪಸ್ಥಿತರಿದ್ದು, ರಾಜ್ಯಪಾಲರನ್ನು ಸ್ವಾಗತಿಸಿದರು. ದೇಗುಲದ ವತಿಯಿಂದ ರಾಜ್ಯಪಾಲರನ್ನು ಸಮ್ಮಾನಿಸಲಾಯಿತು.

ರಾಜ್ಯಪಾಲರುಆರ್‌. ಎನ್‌. ಶೆಟ್ಟಿ ವಸತಿಗೃಹದಲ್ಲಿ ವಿಶ್ರಾಂತಿ ಪಡೆದು ಫಲಾಹಾರ ಸೇವಿಸಿದ ಬಳಿಕ ಉಡುಪಿಗೆ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next