Advertisement

ಕೊಯಿಲ: ಟೆಂಪೊ -ಬೈಕ್ ಢಿಕ್ಕಿ, ಬೈಕ್ ಸವಾರ ಸಾವು

04:59 PM Oct 25, 2022 | Team Udayavani |

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ‌ ಸಂಭವಿಸಿದೆ.

Advertisement

ತೆಂಕ ಮಿಜಾರು, ಬರ್ಕೆ ನಿವಾಸಿ ಗುಣಪಾಲ ಸೇಮಿತ ಅವರ ಪುತ್ರ ದಿನೇಶ ಸೇಮಿತ (32 ವ) ಮೃತಪಟ್ಟವರಾಗಿದ್ದಾರೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ.

ಇದನ್ನೂ ಓದಿ:ಮದರಸಾದಂತೆ ಆರ್ ಎಸ್ಎಸ್ ಶಿಶುವಿಹಾರ ಕೇಂದ್ರಗಳ ಸಮೀಕ್ಷೆಯೂ ನಡೆಯಲಿ: ಓವೈಸಿ

ಅವರು ಮೂಡುಬಿದಿರೆ ಕಡೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿದ್ದ ವೇಳೆ, ಬಿ.ಸಿ.ರೋಡಿನಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಬೀಡಿ ಸಂಸ್ಥೆಯೊಂದರ ಗೂಡ್ಸ್ ಟೆಂಪೋ ಢಿಕ್ಕಿಯಾಗಿದೆ. ದಿನೇಶ ಅವರ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Advertisement

ಮೆಲ್ಕಾರ್ ಸಂಚಾರಿ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next