Advertisement

ಉಡುಪಿ: ರಜೆ ಬಗ್ಗೆ ಮಾಹಿತಿಯಿಲ್ಲದೆ ಶಾಲೆಗೆ ಹೊರಟ ವಿದ್ಯಾರ್ಥಿಗೆ ಟೆಂಪೋ ಢಿಕ್ಕಿ; ಗಂಭೀರ

03:32 PM Jul 05, 2022 | Team Udayavani |

ಉಡುಪಿ:  ರಜೆಯ ಬಗ್ಗೆ ಮಾಹಿತಿ ಇಲ್ಲದೆ ಸೈಕಲ್ ಮೂಲಕ ಶಾಲೆಗೆ ಹೊರಟಿದ್ದ ವಿದ್ಯಾರ್ಥಿಗೆ ಬೊಲೆರೋ ಟೆಂಪೊ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿಯ ಅಂಬಲಪಾಡಿ ಜಂಕ್ಷನ್‌ ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

Advertisement

ಖಾಸಗಿ ಶಾಲೆಯ ವಿದ್ಯಾರ್ಥಿ ಆದಿತ್ಯ ಪಿ. ಶೆಟ್ಟಿಗಾರ್ ಗಾಯಗೊಂಡಿರಯವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಪ್ರಕರಣದ ವಿವರ: ಮಂಗಳವಾರ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಕಾರಣ ರಜೆ ಘೋಷಿಸಲಾಗಿತ್ತು. ಆದರೆ ಆದಿತ್ಯನಿಗೆ ರಜೆಯ ಮಾಹಿತಿಯಿರಲಿಲ್ಲ. ಸೈಕಲ್‌ ನಲ್ಲಿ ಶಾಲೆಗೆ ಹೊರಟ ಆದಿತ್ಯನಿಗೆ  ಅಂಬಲಪಾಡಿ ಜಂಕ್ಷನ್‌ನಲ್ಲಿ ಅತೀ ವೇಗದಿಂದ ಬಂದ ಬೊಲೆರೋ ಟೆಂಪೊ ಢಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ತೀವ್ರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ತಕ್ಷಣ ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾದರೂ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ಅತೀ ವೇಗದ ಚಾಲನೆಯೇ ದುರ್ಘಟನೆಗೆ ಕಾರಣವಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಮಾಜ ಸೇವಕ ವಿಶು ಶೆಟ್ಟಿ ಅವರ ದೂರಿನ ಮೇರೆಗೆ ಪ್ರಕರಣ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next