Advertisement

ನಿವೃತ್ತ ಡಿಜಿಪಿಗೆ ತಾತ್ಕಾಲಿಕ ರಿಲೀಫ್

12:14 PM Apr 11, 2018 | Team Udayavani |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್‌ಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಪ್ರಕರಣದಲ್ಲಿ ಕಾರಾಗೃಹ ಇಲಾಖೆಯ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಪ್ರಕರದ ತನಿಖೆಯನ್ನು ಎಸಿಬಿಗೆ ವಹಿಸಿ ಆದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸತ್ಯನಾರಾಯಣ್‌ ರಾವ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್‌. ಚೌಹಾಣ್‌ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ರಾಜ್ಯ ಸರ್ಕಾರದ ಪರ ವಕೀಲರು ಹೇಳಿಕೆ ನೀಡಿದೆ.

Advertisement

ಅದರಂತೆ ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯನಾರಾಯಣ ರಾವ್‌ ವಿಚಾರಣೆ ಸೇರಿ ಯಾವುದೇ ಕ್ರಮಗಳನ್ನು ಎಸಿಬಿ ಜರುಗಿಸುವುದಿಲ್ಲ ಎಂದು ಹೇಳಿದರು. ಅಲ್ಲದೆ, ಸತ್ಯನಾರಾಯಣ ರಾವ್‌ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ವಾದ ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಏ.16ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಅದುವರೆಗೆ ಸತ್ಯನಾರಾಯಣರಾವ್‌ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ ವಿಚಾರಣೆಯನ್ನು ಏ.19ಕ್ಕೆ ಮುಂದೂಡಿತು. 

ಶಶಿಕಲಾಗೆ ವಿಶೇಷ ಸೌಲಭ್ಯ ನೀಡಲು ಅಂದಿನ ಡಿಜಿಪಿ ಸತ್ಯನಾರಾಯಣ ರಾವ್‌ 2 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆಗಿನ ಡಿಐಜಿ ಡಿ.ರೂಪಾ ಆರೋಪಿಸಿದ್ದರು. ಈ ಕುರಿತಂತೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ವಿಚಾರಣೆ ನಡೆಸಿದ ನಿವೃತ್ತ ಐಎಎಸ್‌ ಅಧಿಕಾರಿ ವಿನಯಕುಮಾರ್‌ ನೇತೃತ್ವದ ತಂಡ ವರದಿ ನೀಡಿದ್ದು, ಈ ವರದಿ ಆಧರಿಸಿ ಸರ್ಕಾರ ಫೆ. 26ರಂದು ಪ್ರಕರಣದ ತನಿಖೆಯನ್ನು ಎಸಿಬಿಗೆ ವಹಿಸಿತ್ತು. ಅದರಂತೆ ಎಸಿಬಿ ಸತ್ಯನಾರಾಯಣರಾವ್‌ ವಿರುದ್ಧ ಎಫ್ಐಆರ್‌ ದಾಖಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next