Advertisement
ಇದರೊಂದಿಗೆ ಮೇಯರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿ ಹಸಿ ಹಾಗೂ ಒಣ ತ್ಯಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಒಬ್ಬರೇ ಗುತ್ತಿಗೆದಾರರಿಗೆ ವಹಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಆದರೆ, ಪಾಲಿಕೆ ಅಧಿಕಾರಿಗಳು ಮಾತ್ರ ಈಗಾಗಲೇ ಹಸಿ ತ್ಯಾಜ್ಯ ವಿಲೇವಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಶೀಘ್ರ ಕಾರ್ಯಾದೇಶ ನೀಡಲು ಸಿದ್ಧತೆ ನಡೆಸಿದ್ದಾರೆ.
Related Articles
Advertisement
ಶುಲ್ಕ ವಸೂಲಿ: 10 ಕೆ.ಜಿ.ಗಿಂತಲೂ ಹೆಚ್ಚಿನ ತ್ಯಾಜ್ಯ ಉತ್ಪಾದಿಸುವ ವಾಣಿಜ್ಯ ಉದ್ಯಮ ಮತ್ತು ವಸತಿ ಕಟ್ಟಡಗಳನ್ನು ಸಗಟು ತ್ಯಾಜ್ಯ ಉತ್ಪಾದಕರೆಂದು ಪರಿಗಣಿಸಲಾಗಿದೆ. ಗುತ್ತಿಗೆದಾರರೇ ಸಗಟು ಉತ್ಪಾದಕರಿಂದ ಹಣ ಪಡೆಯುತ್ತಿದ್ದು, ಬಿಬಿಎಂಪಿ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಪಾಲಿಕೆಗೆ ನಿಗದಿತ ಶುಲ್ಕ ಪಾವತಿಸುತ್ತಿದ್ದಾರೆಂದರು.
ಒಬ್ಬರಿಗೆ ಟೆಂಡರ್ ನೀಡಿ: ಆಯುಕ್ತರ ಉತ್ತರಕ್ಕೆ ಒಪ್ಪದ ಪಾಲಿಕೆ ಸದಸ್ಯರು, ಮತ್ತೂಮ್ಮೆ ಚರ್ಚಿಸಿ ಗುತ್ತಿಗೆ ಷರತ್ತು ಬದಲಿಸಿ ಎಂದು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಗುತ್ತಿಗೆ ಷರತ್ತುಗಳನ್ನು ಸಂಪೂರ್ಣವಾಗಿ ಬದಲಿಸಲು ಸಾಧ್ಯವಾಗುವುದಿಲ್ಲ. 33 ವಾರ್ಡ್ಗಳಲ್ಲಿ ಚಿಂದಿ ಆಯುವವರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ತಿಳಿಸಲು ಸಭೆ ನಡೆಸಲಾಗುವುದು. ಜತೆಗೆ ಟೆಂಡರ್ ನಲ್ಲಿಯೇ ವಾರ್ಡ್ನಲ್ಲಿ ಹೆಚ್ಚುವರಿ ಶೇ.25 ಆಟೋಗಳನ್ನು ಪಡೆಯಬಹುದು ಎಂಬ ನಿಯಮವಿದೆ. ಹೀಗಾಗಿ ಹೆಚ್ಚುವರಿ ಆಟೋಗಳನ್ನು ಒಣ ತ್ಯಾಜ್ಯ ವಿಲೇವಾರಿಗೆ ಬಳಸುವ ಕುರಿತಂತೆ ಚರ್ಚಿಸಲಾಗುವುದೆಂದರು. ರೋಗಿಗಳ ಪರದಾಟ:ಇಂದಿರಾನಗರ-ಕೋರಮಂಗಲದಿಂದ ಮಣಿಪಾಲ್ ಆಸ್ಪತ್ರೆಗೆ ಬರುವವರಿಗೆ ದೊಮ್ಮಲೂರು ಮೇಲ್ಸೇತುವೆ ಬಳಿ ಮಾರ್ಗಸೂಚಿ ಫಲಕವಿಲ್ಲ. ಯಾವ ಕಡೆ ಹೋಗಬೇಕೆಂದು ಗೊತ್ತಾಗದೆ ಸುತ್ತಿ ಬಳಸಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೂಕ್ತ ಮಾರ್ಗಸೂಚಿ ಅಳವಡಿಸುವಂತೆ ಪಕ್ಷೇತರ ಸದಸ್ಯ ಲಕ್ಷ್ಮೀನಾರಾಯಣ ಆಗ್ರಹಿಸಿದರು. ಮಧ್ಯಪ್ರವೇಶಿಸಿದ ಮೇಯರ್ ಗಂಗಾಂಬಿಕೆ, ಪಾಲಿಕೆ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದೆಂದರು. ಬಿಬಿಎಂಪಿ ಮಾಸಿಕ ಸಭೆಯಲ್ಲಿ ಪಾಲಿಕೆ ಸದಸ್ಯರು ಪಕ್ಷಾತೀತವಾಗಿ ತಮ್ಮ ಅಭಿಪ್ರಾಯ ಮಂಡಿಸಿದರು.. ಕೌನ್ಸಿಲ್ ಸಭೆಯಲ್ಲಿ
ನಡೆದಿದ್ದು ಏನೇನು?: ಬಿಜೆಪಿ-ಕಾಂಗ್ರೆಸ್ ಸದಸ್ಯರು ತಮ್ಮ ನಾಯಕರನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಕೌನ್ಸಿಲ್ ಸಭೆಯ ಅರ್ಧ ದಿನ ಹಾಳು ಮಾಡಿದರು. ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರೆ, ತಮ್ಮ ಪಕ್ಷದ ಹೀನಾಯ ಸೋಲನ್ನು ಬಿಜೆಪಿ ಸದಸ್ಯರು ಅಣಕಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಸದಸ್ಯರು ಗದ್ದಲವೆಬ್ಬಿಸಿದರು. ಪರಿಣಾಮ ಸಭೆಯ ಅರ್ಧ ದಿನ ಯಾವುದೇ ಗಂಭೀರ ಚರ್ಚೆ ನಡೆಯದೆ ಮುಕ್ತಾಯವಾಯಿತು.
ಕುಸ್ತಿಗೆ ನಿಂತ ಸದಸ್ಯರು: ಸಭೆಯಲ್ಲಿ ಬಿಜೆಪಿ ಸದಸ್ಯ ಬಾಲಕೃಷ್ಣ ತಮ್ಮ ವಾರ್ಡ್ನಲ್ಲಿ ತ್ಯಾಜ್ಯ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ಆರೋಪಿಸಿದರು. ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ವೆಂಕಟೇಶ್, ಮೋದಿ ಅವರನ್ನು ಕೇಳಿ ಸರಿಪಡಿಸುತ್ತಾರೆ ಎಂದು ವ್ಯಂಗ್ಯವಾಡಿದರು. ಕೆರಳಿದ ಬಿಜೆಪಿ ಸದಸ್ಯರು, ಸಮಸ್ಯೆ ಬಗ್ಗೆ ಕೇಳಿದರೆ ಮೋದಿ ಅವರ ಹೆಸರನ್ನೇಕೆ ಎಳೆದು ತರುತ್ತೀರಿ ಎಂದರು. ಒಂದು ಹಂತದಲ್ಲಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್ ಅವರಿದ್ದ ಕಡೆಗೆ ತೆರಳಿ ಕುಸ್ತಿ ಆಡುವಂತೆ ವರ್ತಿಸಿದರು. ಆಗ ಇತರ ಸದಸ್ಯರು ಇಬ್ಬರೂ ನಾಯಕರನ್ನು ತಡೆದರಾದರೂ, ಗಲಾಟೆ ಮಾತ್ರ ಕಡಿಮೆಯಾಗಲಿಲ್ಲ. ಹೀಗಾಗಿ ಮೇಯರ್ ಸಭೆ ಮುಂದೂಡಿದರು.
ಕೌನ್ಸಿಲ್ ಸಭೆಯಲ್ಲಿ ಮೋದಿ ಜಪ: ಸಭೆ ಆರಂಭದಲ್ಲೇ ಬಿಜೆಪಿಯ ಎಲ್ಲಾ 101 ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಮುಖವಾಡಧರಿಸಿ ಸಭಾಂಗಣದೊಳಗೆ ಬಂದರು. ಜತೆಗೆ, ಮೋದಿ ಮೋದಿ ಎಂಬ ಘೋಷಣೆ ಮೂಲಕ ಬಿಜೆಪಿ ಗೆಲುವನ್ನು ಸಂಭ್ರಮಿಸಿದರು.ಪಕ್ಷಾ ತೀತವಾಗಿ ಎಲ್ಲಾ ಸದಸ್ಯರು, ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ಬೆಂಗಳೂರಿನ 3 ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದಕಾರ್ಪೋರೇಟರ್ ಮುನಿಸ್ವಾಮಿ ಅವರಿಗೆ ಅಭಿನಂದಿಸಿದರು.
ಜಲಮಂಡಳಿ ಕಾರ್ಯವೈಖರಿಗೆ ಆಕ್ರೋಶ: ಜಲಮಂಡಳಿ ನಿರ್ಲಕ್ಷ್ಯದಿಂದ ಬಿಬಿಎಂಪಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳ ಜಾರಿಯಲ್ಲಿ ವಿಳಂಬವಾಗುತ್ತಿದೆ ಎಂದು ಮಾಜಿ ಮೇಯರ್ ಮಂಜುನಾಥರೆಡ್ಡಿ ಆರೋಪಿಸಿದರು. ಜಲಮಂಡಳಿ ಅಸಮರ್ಪಕ ಕಾಮಗಾರಿ ಕೈಗೆತ್ತಿಕೊಂಡಿದೆ. ಮಳೆಗಾಲಕ್ಕೆ ಮುಂಚಿತವಾಗಿ ವೈಟ್ಟಾಪಿಂಗ್ ಕಾಮಗಾರಿ ಮುಗಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದರೂ, ಜಲಮಂಡಳಿ ಪೈಪ್ ಸ್ಥಳಾಂತರ ಮಾಡುತ್ತಿಲ್ಲ. ಹೀಗಾಗಿ ಮತ್ತಿತರ ಕಾಮಗಾರಿಗಳಿಗೂ ಸಮಸ್ಯೆ ಎದುರಾಗುತ್ತಿದೆ ಎಂದು ದೂರಿದರು.