Advertisement

Udupi: ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪಟಿ, ಮಹಿಳಾ ಸದಸ್ಯೆಗೆ ಗಾಯ

04:52 PM Jul 12, 2024 | Team Udayavani |

ಉಡುಪಿ: ಸಭೆಯ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿರುವ ಘಟನೆ ಉಡುಪಿಯ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಶುಕ್ರವಾರ ನಡೆದಿದೆ.

Advertisement

ಸುಮಾರು 50 ಲೋಡ್ ಕಸವನ್ನು ಹೂತು ಹಾಕಿರುವ ಹಿನ್ನೆಲೆಯಲ್ಲಿ ಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಕೂಡಲೇ ಕಸವನ್ನು ಹೊರತೆಗೆಯಬೇಕು ಎಂದು ಗ್ರಾಮಸ್ಥರು ಪಂಚಾಯತ್ ಅಧ್ಯಕ್ಷೆ ಶೋಭಾ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಇದರ ಹಿನ್ನೆಲೆಯಲ್ಲಿ ಪಂಚಾಯತ್ ನಲ್ಲಿ ಸಭೆ ನಡೆಯುತಿದ್ದ ವೇಳೆ ಬಿಜೆಪಿ ಸದಸ್ಯರು ಸಭೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸದಸ್ಯರು ಕೋರಂ ಇಲ್ಲದೆ ಸಭೆ ನಡೆಸಲು ವಿರೋಧಿಸಿದ್ದಾರೆ ಅಲ್ಲದೆ ಸಭೆಗೆ ಮೂವರು ಸದಸ್ಯರು ಗೈರಾಗಿದ್ದು ಸಭೆ ನಡೆಸಲು ಬಿಡದೆ ಬಿಜೆಪಿ ಸದಸ್ಯರು ಸಭೆಯ ಬಾವಿಗಿಳಿದು ವಿರೋಧ ವ್ಯಕ್ತಪಡಿಸಿದ್ದಾರೆ ಈ ನಡುವೆ ಕಾಂಗ್ರೆಸ್ ಸದಸ್ಯರು ಮಧ್ಯ ಪ್ರವೇಶಿಸಿ ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರ ದೂಡಲು ಯತ್ನಿಸಿದ್ದಾರೆ ಈ ವೇಳೆ ಮಾತಿಗೆ ಮಾತು ಬೆಳೆದು ಇಒ, ಪೊಲೀಸರ ಎದುರೇ ಎಳೆದಾಡಿಕೊಂಡು ಜಗಳವಾಡಿದ್ದಾರೆ. ಈ ನಡುವೆ ಗ್ರಾ.ಪಂಚಾಯತ್ ನ ಮಹಿಳಾ ಸದಸ್ಯೆಯೊಬ್ಬರು ಗಾಯಗೊಂಡಿದ್ದಾರೆ.

ಸುಮಾರು ಅರ್ಧ ಗಂಟೆಗಳ ಕಾಲ ಬಿಗುವಿನ ವಾತಾವರಣ ಉಂಟಾಗಿದ್ದು ಬಳಿಕ ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆದು ಕಾಂಗ್ರೆಸ್ ಸದಸ್ಯರ ವಿರುದ್ಧ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next