Advertisement

ನೂಪುರ್ ಗೆ ಬೆಂಬಲ : ಶಿರಚ್ಛೇದನ, ವಿಡಿಯೋ ವೈರಲ್; ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ

08:32 PM Jun 28, 2022 | Team Udayavani |

ನವದೆಹಲಿ: ಪ್ರವಾದಿ ಪೈಗಂಬರ್ ಕುರಿತು ವಿವಾದದ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾಗೆ ಬೆಂಬಲ ನೀಡಿರುವುದಕ್ಕೆ ಹಾಡಹಗಲೇ ವ್ಯಕ್ತಿಯೊಬ್ಬನ ಶಿರಚ್ಛೇದನ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭೀಬತ್ಸ ಘಟನೆ ರಾಜಸ್ಥಾನದ ಉದಯ್ ಪುರದಲ್ಲಿ ನಡೆದಿದೆ.

Advertisement

ಉದಯ್ ಪುರದ ಜನನಿಭಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದೊಂದು ಪಾಠ ಎಂಬುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶಿರಚ್ಛೇದನದ ವಿಡಿಯೋ ಪೋಸ್ಟ್ ಮಾಡಿ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ.

ಪೊಲೀಸರ ಪ್ರಾಥಮಿಕ ವರದಿ ಪ್ರಕಾರ, ಶಿರಚ್ಛೇದನಕ್ಕೊಳಗಾದ ವ್ಯಕ್ತಿ ವೃತ್ತಿಯಲ್ಲಿ ಟೈಲರ್ ಆಗಿದ್ದು, ಹರಿತವಾದ ಆಯುಧದಿಂದ ಟೈಲರ್ ತಲೆ ಕಡಿಯಲಾಗಿದೆ. ಇದೊಂದು ತಾಲಿಬಾನ್ ಮಾದರಿಯ ಕೊಲೆಯಾಗಿದೆ ಎಂದು ವರದಿ ಹೇಳಿದೆ.

ಈ ಘಟನೆಯ ನಂತರ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಜನರು ಶಾಂತಿಯನ್ನು ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಯಾರೇ ಇದರಲ್ಲಿ ಶಾಮೀಲಾಗಿದ್ದರೂ ಅವರಿಗೆ ತಕ್ಕ ಶಾಸ್ತಿ ಮಾಡುವುದಾಗಿ ಗೆಹ್ಲೋಟ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next