Advertisement

ಭೀಕರ ಅಪಘಾತ: ಕಾರು ನಜ್ಜು ಗುಜ್ಜು;ವಿದ್ಯಾರ್ಥಿಗಳಿಬ್ಬರ ದುರ್ಮರಣ 

10:02 AM Jul 25, 2018 | Team Udayavani |

ಬೆಂಗಳೂರು /ಮಂಗಳೂರು: ತುಮಕೂರು ರಸ್ತೆಯ ನೆಲಮಂಗಲದ ತಾವರೆಕೆರೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಣ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಸೇರಿದಂತೆ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. 

Advertisement

ಮೃತರು ಶ್ರೀನಿಧಿ ಅಸ್ರಣ್ಣ(21)  ಮತ್ತು ಪ್ರಜ್ವಲ್‌(20)ಎನ್ನುವವರಾಗಿದ್ದಾರೆ. ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ಇವರು ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. 

ಮೃತ ಶ್ರೀನಿಧಿ ಅಸ್ರಣ್ಣ

Advertisement

ಪ್ರಜ್ವಲ್‌ ತಮ್ಮನನ್ನು ತುಮಕೂರಿಗೆ ಬಿಟ್ಟು ವಾಪಾಸಾಗುತ್ತಿದ್ದ ವೇಳೆ ಅವಘಡ ನಡೆದಿದೆ.ನಾಲ್ವರಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿಯಾಗಿ ಬಳಿಕ ಸರಕಾರಿ ಬಸ್‌ಗೆ ಢಿಕ್ಕಿಯಾಗಿ ಸಂಪೂರ್ಣ ನಜ್ಜುಗುಜ್ಜಾ ಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿನಲ್ಲಿದ್ದ ಶರತ್‌ ಭಂಡಾರಿ ಮತ್ತು ಶರತ್‌ ಉಡುಪ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಕಟೀಲಿನಲ್ಲಿ ವಿಚಾರ ತಿಳಿದು ನೀರವ ಮೌನ ಆವರಿಸಿದ್ದು, ಹಲವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next