Advertisement

ಮೊಪೆಡ್-ಬೈಕ್- ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

04:19 PM May 15, 2023 | Team Udayavani |

ಗದಗ: ಟಿವಿಎಸ್ ಎಕ್ಸೆಲ್, ಹಿರೋ ಸ್ಪ್ಲೆಂಡರ್ ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವಿಗೀಡಾಗಿರುವ ಘಟನೆ ತಾಲೂಕಿನ ಅಡವಿ ಸೋಮಾಪೂರ ಬಳಿ ಮಲ್ಲಿಕಾರ್ಜುನ ಮಠದ ಹತ್ತಿರ ಸೋಮವಾರ ನಡೆದಿದೆ.

Advertisement

ಮುಂಡರಗಿ ತಾಲೂಕಿನ ಸಿಂಗಟರಾಯನಕೇರಿ ತಾಂಡಾದ ಶಿವಪ್ಪ ನಾಯಕ್ (50 ವ), ಛಬ್ಬಿ ತಾಂಡಾದ ಶಿವಾನಂದ ಲಮಾಣಿ (33 ವ) ಹಾಗೂ ಡೋಣಿ ತಾಂಡಾದ ಕೃಷ್ಣಪ್ಪ ಚವ್ಹಾಣ ಮೃತಪಟ್ಟಿದ್ದಾರೆ.

ಬೈಕ್ ಸವಾರರು ಗದಗ ಕಡೆ ಹೊರಟಿದ್ದರು. ಈ ವೇಳೆ ಗದಗ ಕಡೆಯಿಂದ ಕಾರು ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು ಎರಡೂ ದ್ವಿಚಕ್ರ ವಾಹನಗಳಲ್ಲಿದ್ದ ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನೋರ್ವ ಸವಾರ ಗದಗನ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ಬಿ.ವೈ.ವಿಜಯೇಂದ್ರ ಗೆಲ್ಲದಂತೆ ವಾಮಾಚಾರ!; ದೂರು ದಾಖಲು

ಮೃತರಲ್ಲಿ ಇಬ್ಬರು ಮದುವೆಗೆ ಬೇಕಾಗಿದ್ದ ವಸ್ತುಗಳನ್ನು ಖರೀದಿಗೆ ಹೊರಟಿದ್ದರು. ಇನ್ನೋರ್ವ ಹಲ್ಲು ನೋವಿನ ಚಿಕಿತ್ಸೆ ಪಡೆಯಲು ಗದಗಗೆ ಹೊರಟಿದ್ದರು ಎನ್ನಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Advertisement

ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next