Advertisement

48 ಗಂಟೆಗಳಲ್ಲಿ ನವದೆಹಲಿಗೆ ಉಗ್ರ ದಾಳಿ?

10:04 AM Oct 30, 2019 | Team Udayavani |

ಹೊಸದಿಲ್ಲಿ/ಶ್ರೀನಗರ: ನವದೆಹಲಿಗೆ ಯಾವುದೇ ಕ್ಷಣದಲ್ಲಿ ಉಗ್ರರು ದಾಳಿ ಎಸಗುವ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅ.31ರಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ಅಸ್ತಿತ್ವಕ್ಕೆ ಬರಲಿದೆ. ಹೀಗಾಗಿ, ಪಾಕ್‌ ಪ್ರೇರಿತ ಉಗ್ರ ಸಂಘಟನೆಗಳು ನವದೆಹಲಿಯ ಮೇಲೆ ದಾಳಿ ನಡೆಸಬಹುದು ಎಂದು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

ಹೀಗಾಗಿ ಜಮ್ಮು ಮತ್ತು ಕಾಶ್ಮೀರ, ನವದೆಹಲಿಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿವೆ. ಹೀಗಾಗಿ, ಮುಂದಿನ 48 ಗಂಟೆಗಳ ಕಾಲ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಮತ್ತು ಪ್ರಮುಖ ಸ್ಥಳಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ಗುಂಡಿನ ದಾಳಿ: ಈ ನಡುವೆ ಪುಲ್ವಾಮಾದ ರಾಜ್‌ಪೊರಾದಲ್ಲಿರುವ ಸಿಆರ್‌ಪಿಎಫ್ ಬಂಕರ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next