Advertisement

ತಮಿಳುನಾಡಿಗೆ ಉಗ್ರರ ಭೀತಿ: ಹಿಂದೂ ಮುಖಂಡರು ಟಾರ್ಗೆಟ್‌

10:00 AM Dec 20, 2019 | Team Udayavani |

ಕೊಯಮತ್ತೂರು: ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಭಾರೀ ಪ್ರಮಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಿಂದೂ ಸಂಘಟನೆಗಳ ಮುಖಂಡರನ್ನು ಗುರಿಯಾಗಿಸಿಕೊಂಡು ಕೇರಳದ ಕರಾವಳಿ ಭಾಗದಿಂದ ನಾಲ್ವರು ದುಷ್ಕರ್ಮಿಗಳು ತಮಿಳುನಾಡಿಗೆ ನುಸುಳುವ ಸಾಧ್ಯತೆಯಿದೆ ಎಂಬ ಗುಪ್ತಚರ ವರದಿ ಆಧರಿಸಿ ಪೊಲೀಸರು ಎಲ್ಲೆಡೆ ಬಂದೋಬಸ್ತ್ ಕೈಗೊಂಡಿದ್ದಾರೆ.

Advertisement

ದೆಹಲಿ ಗುಪ್ತಚರ ದಳವು ಈ ಉಗ್ರಗಾಮಿಗಳ ಫೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದು, ತಮಿಳುನಾಡಿನ ಕೆಲ ಭಾಗಗಳು, ಚೆಕ್‌ಪೋಸ್ಟ್‌ಗಳು ಹಾಗೂ ಸೂಕ್ಷ್ಮ ಪ್ರದೇಶಗಳು, ಅದರಲ್ಲೂ ರೈಲ್ವೆ , ಬಸ್‌ ನಿಲ್ದಾಣಗಳಲ್ಲಿ ಹೈಅಲರ್ಟ್‌ ಘೋಷಿಸಿ, ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಮಾಹಿತಿ ಇಲ್ಲ.

ಸೇಲಂ – ಕೊಯಮತ್ತೂರು ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಗಳಲ್ಲೂ ಇಲ್ಲಿನ ಪೊಲೀಸ್‌ ಇಲಾಖೆ ನಿಗಾ ವಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next