Advertisement

ಮಾತುಕತೆಗೆ ಭಯೋತ್ಪಾದನೆ ಮುಕ್ತ ವಾತಾವರಣ ಅಗತ್ಯ: ಭಾರತ

09:10 PM Aug 03, 2023 | Pranav MS |

ನವದೆಹಲಿ: ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಇದ್ದರೆ ಮಾತ್ರ ಪಾಕಿಸ್ತಾನದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಸಾಧ್ಯ ಎಂದು ಭಾರತ ಪ್ರತಿಪಾದಿಸಿದೆ.

Advertisement

“ಯುದ್ಧ ಪಾಕಿಸ್ತಾನಕ್ಕೆ ಆಯ್ಕೆಯಲ್ಲ. ಭಾರತದೊಂದಿಗೆ ಮಾತುಕತೆಗೆ ಸಿದ್ಧ’ ಎಂದು ಇತ್ತೀಚೆಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ಹೇಳಿಕೆ ಹಿನ್ನೆಲೆಯಲ್ಲಿ ಭಾರತದಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಷರೀಫ್ ಹೇಳಿಕೆ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗಿ, “ಪಾಕಿಸ್ತಾನ ಸೇರಿದಂತೆ ಎಲ್ಲಾ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಭಾರತ ಬಯಸುತ್ತದೆ. ಆದರೆ ಇದಕ್ಕೆ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಅತ್ಯಗತ್ಯ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next