Advertisement

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

08:52 AM Oct 28, 2021 | Team Udayavani |

ಶ್ರೀನಗರ: ಬಾರಾಮುಲ್ಲಾದ ಚೆರ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಏರಿಯಾ ಡಾಮಿನೇಷನ್ ಪ್ಯಾಟ್ರೋಲ್ (ಎಡಿಪಿ) ಮೇಲೆ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದ್ದು, ಭೀಕರ ಗುಂಡಿನ ಚಕಮಕಿ ನಡೆದಿದೆ.

Advertisement

ಘಟನೆಯಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿದೆ. ಹತ್ಯೆಗೀಡಾದ ಭಯೋತ್ಪಾದಕನಿಂದ ಪಿಸ್ತೂಲ್, ಲೋಡ್ ಮಾಡಲಾದ ಮ್ಯಾಗಜೀನ್ ಮತ್ತು ಪಾಕಿಸ್ತಾನ ನಿರ್ಮಿತ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದಾಗಿ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾತನಾಡಿ, “ಹತ್ಯೆಗೊಳಗಾದ ಭಯೋತ್ಪಾದಕನನ್ನು ಕುಲ್ಗಾಮ್ ಜಿಲ್ಲೆಯ ಜಾವೇದ್ ಅಹ್ ವಾನಿ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ವಾನ್ಪೋಹ್‌ನಲ್ಲಿ ಬಿಹಾರದ 2 ಕಾರ್ಮಿಕರ ಹತ್ಯೆಯಲ್ಲಿ ಭಯೋತ್ಪಾದಕ ಗುಲ್ಜಾರ್ ಗೆ ಈತ ಸಹಾಯ ಮಾಡಿದ್ದ” ಎಂದಿದ್ದಾರೆ.

ಇದನ್ನೂ ಓದಿ:ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

Advertisement

Udayavani is now on Telegram. Click here to join our channel and stay updated with the latest news.

Next