Advertisement

ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಯೋಧ ಹುತಾತ್ಮ

10:40 AM Sep 10, 2019 | Mithun PG |

ಶ್ರೀನಗರ: ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ, ಶೋಧಕಾರ್ಯದಲ್ಲಿ ನಿರತನಾಗಿದ್ದ ಯೋಧನೋರ್ವ  ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಗಂದೇರ್ ಬಲ್ ಜಿಲ್ಲೆಯಲ್ಲಿ ನಡೆದಿದೆ.

Advertisement

ಕಳೆದೆರಡು ದಿನಗಳಿಂದ ಗಂದೇರ್ ಬಲ್ನ ಪುಸಾನ್ ಪ್ರದೇದಲ್ಲಿ ಉಗ್ರ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಯೋಧರು ಶೋಧಕಾರ್ಯದಲ್ಲಿ ತೊಡಗಿದ್ದರು.

ಮೃತ ಯೋಧನನ್ನು ದಫೇದಾರ್ ಅಸ್ಲಾಂ ಖಾನ್ ಎಂದು ಗುರುತಿಸಲಾಗಿದ್ದು ನದಿ ದಡದಲ್ಲಿ ಕಾರ್ಯಾಚರಣೆಯಲ್ಲಿ ಮಗ್ನರಾಗಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ರಕ್ಷಣಾ ಕಾರ್ಯ ನಡೆಸಿತ್ತಾದರೂ ನೀರಿನ ಹರಿವಿನ ವೇಗ ಹೆಚ್ಚಾದ್ದರಿಂದ ಕ್ಷಣ ಮಾತ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಸತತ ಕಾರ್ಯಚರಣೆಯ ನಂತರ ಪತ್ತೆಹಚ್ಚಲಾಯಿತಾದರೂ ಅಷ್ಠರ ವೇಳೆಗಾಗಲೆ ಮೃತರಾಗಿದ್ದರು. ಶ್ರೀನಗರದ ಚಿನಾರ್ ಕಾರ್ಪೋರೇಶನ್ ಹೆಡ್ ಕ್ವಾಟರ್ಸ್ ನಲ್ಲಿ ಮೃತ ಯೋಧನ ಪಾರ್ಥಿವ ಶರೀರಕ್ಕೆ  ಸೇನೆ ಅಂತಿಮ ಗೌರವ ಸಲ್ಲಿಕೆ ಮಾಡಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next