Advertisement

‘ಘೋಷಣೆ ಸಾಲದು, ಉಗ್ರ ಕ್ರಮ ಬೇಕು’

01:09 AM Jul 26, 2019 | Team Udayavani |

ನವದೆಹಲಿ: ಪಾಕಿಸ್ತಾನದಲ್ಲಿ ಈಗಲೂ 40 ಸಾವಿರ ಉಗ್ರರು ಸಕ್ರಿಯರಾಗಿದ್ದಾರೆ ಎಂಬ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ, ಉಗ್ರರ ಬಗ್ಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ನೀಡುವುದಷ್ಟೇ ಅಲ್ಲ, ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲೂ ಇದು ಸಕಾಲ ಎಂದು ಹೇಳಿದೆ.

Advertisement

ಈ ಹಿನ್ನೆಲೆಯಲ್ಲಿ, ಗುರುವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ರವೀಶ್‌ ಕುಮಾರ್‌ ಹೀಗೆ ಆಗ್ರಹಿಸಿದ್ದಾರೆ.

ಈ ನಡುವೆ, ಸ್ವದೇಶಕ್ಕೆ ಮರಳಿರುವ ಇಮ್ರಾನ್‌ ಖಾನ್‌, ಪಾಕ್‌-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ಭಾಷ್ಯ ಬರೆದು ಬಂದಿದ್ದು, 1992ರಲ್ಲಿ ಏಕದಿನ ವಿಶ್ವಕಪ್‌ ಗೆದ್ದು ಪಾಕ್‌ಗೆ ಹಿಂದಿರುಗಿದ್ದಾಗ ಉಂಟಾಗಿದ್ದ ಸಂಭ್ರಮವೇ ಈಗ ಮತ್ತೆ ತಮ್ಮಲ್ಲಿ ಮರುಕಳಿಸಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next