Advertisement

ಪರೀಕ್ಷಾ ಅಕ್ರಮ; ಕ್ರಮಕ್ಕೆ ಆಗ್ರಹ

05:27 PM May 14, 2019 | Team Udayavani |

ರಾಯಚೂರು: ನಗರದ ಖಾಸಗಿ ಮನೆಯಲ್ಲಿ ಬಿಕಾಂ ಪರೀಕ್ಷೆಯನ್ನು ಅಕ್ರಮವಾಗಿ ನಡೆಸಿದ ಕಾಲೇಜುಗಳ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ನಗರರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಘಟನೆ ಶಿಕ್ಷಣ ವ್ಯವಸ್ಥೆಯ ಅವನತಿಯನ್ನು ತೋರಿಸುತ್ತಿದೆ. ಶಿಕ್ಷಣದ ವ್ಯಾಪಾರೀಕರಣ ಹೇಗಾಗುತ್ತಿದೆ ಎನ್ನಲಿಕ್ಕೆ ಪ್ರಮುಖ ಸಾಕ್ಷಿಯಂತಿದೆ. ಅಮಾಯಕ ವಿದ್ಯಾರ್ಥಿಗಳನ್ನು ಇಂಥ ಕೂಪಕ್ಕೆ ಸಿಲುಕಿಸಿ ಅವರ ಭವಿಷ್ಯದ ಜತೆ ಚಲ್ಲಾಟ ಆಡಲಾಗುತ್ತಿದೆ. ಇಂಥ ಘಟನೆಯನ್ನು ತೀವ್ರವಾಗಿ ಖಂಡಿಸಬೇಕಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇಂಥ ಅಕ್ರಮಗಳನ್ನು ನಡೆಸುವ ಮೂಲಕ ಪ್ರಾಮಾಣಿಕವಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಂಟಕವಾಗಿ ಮಾರ್ಪಟ್ಟಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಲ್ಲಿ ಭಾಗಿಯಾದ ಸಂಸ್ಥೆಗಳ ಮಾನ್ಯತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಅಧ್ಯಕ್ಷ ಮಹೇಶ ಚೀಕಲಪರ್ವಿ, ಸಂಘಟನೆ ಸದಸ್ಯರಾದ ಪ್ರಮೋದ, ಪೀಸ್‌ಸಾಬ್‌, ಆಂಜನೇಯ, ಮಲ್ಲಿಕಾರ್ಜುನ, ಸಣ್ಣಬಸವ, ಹೇಮಂತ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next