Advertisement

ನಿಜಾಮುದ್ದೀನ್ ಜಮಾತ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬೀದರ್ ನ 26 ಜನರ ಗಂಟಲು ದ್ರವ ಪರೀಕ್ಷೆ

09:08 AM Apr 01, 2020 | keerthan |

ಬೀದರ್: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಇತ್ತೀಚೆಗೆ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿ ವಾಪಸ್ಸಾಗಿರುವ ಬೀದರನ 26 ಜನರನ್ನು ಗುರುತಿಸಲಾಗಿದ್ದು, ಅವರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಮಹಾದೇವ್ ತಿಳಿಸಿದ್ದಾರೆ

Advertisement

‘ಉದಯವಾಣಿ’ ಜತೆ ಮಾತನಾಡಿರುವ ಅವರು, ಈ 26 ಜನರಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳು ಇಲ್ಲ. ಆದರೆ ದೆಹಲಿಯ ಪ್ರಾರ್ಥನಾ ಕೂಟದಲ್ಲಿ ದೇಶದ ಬೇರೆ ಕಡೆಯಿಂದ ಭಾಗವಹಿಸಿದ್ದ ಕೆಲವರಲ್ಲಿ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಕೂಟದಲ್ಲಿ ಪಾಲ್ಗೊಂಡಿದ್ದ ಎಲ್ಲರ ಪರೀಕ್ಷೆ ನಡೆಸಲು ಸರ್ಕಾರ ನಿರ್ದೇಶನ ನೀಡಿದ್ದು, ಈ 26 ಜನರ ಮಾದರಿಯ ಪರೀಕ್ಷೆಗಾಗಿ ಮಂಗಳವಾರ ಸಂಜೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ದೆಹಲಿಯಿಂದ ವಾಪಸ್ಸಾಗಿ ಬ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಸೊಂಕಿತ ವ್ಯಕ್ತಿಯ ಮಾದರಿಯನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next